AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 19, 2021 | 5:32 PM

Share

ದೆಹಲಿ: ತಾನೊಬ್ಬ ಸೇನಾಧಿಕಾರಿ ಎಂದು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಅಕೌಂಟ್​ಗಳನ್ನು ಹೊಂದಿದ್ದ ಈ ವ್ಯಕ್ತಿ ತಾನೊಬ್ಬ ಆರ್ಮಿ ಆಫೀಸರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಈತನ ಹೆಸರು ದಿಲೀಪ್​ ಕುಮಾರ್​ ಎಂದಾಗಿದ್ದು ದೆಹಲಿಯ ಮೋಹನ್ ಗಾರ್ಡನ್​ನಲ್ಲಿರುವ ಸೈನಿಕ್ ಎನ್​ಕ್ಲೇವ್​ ನಿವಾಸಿಯಾಗಿದ್ದ. ಶಾಲೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಈತ ಸೇನಾ ಸಮವಸ್ತ್ರದಲ್ಲಿಯೇ ಇದ್ದ. ಹಾಗೇ ಒಂದು ನಕಲಿ ಐಡಿಯನ್ನೂ ಹೊಂದಿದ್ದ. ಆತನ ಮೊಬೈಲ್​ ಜತೆಗೆ ಫೇಕ್​ ಐಡಿ ಕಾರ್ಡ್​ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಸೌತ್​​ನ ಡಿಸಿಪಿ ಅತುಲ್​ ಕುಮಾರ್​ ಠಾಕೂರ್​ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನೊಬ್ಬ ಸೇನಾ ಅಧಿಕಾರಿ, ಕ್ಯಾಪ್ಟನ್ ಶೇಖರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅನೇಕ ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೆ, ಒಂದಷ್ಟು ಅಂತಾರಾಷ್ಟ್ರೀಯ ನಂಬರ್​ಗಳಿಗೂ ಆಗಾ ಕರೆ ಮಾಡುತ್ತಿದ್ದ ಎಂಬುದು ಮೊಬೈಲ್​ ಚೆಕ್​ ಮಾಡಿದಾಗ ಬೆಳಕಿಗೆ ಬಂದಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳು ಕೊರೊನಾ ವಿರುದ್ಧ ಹೋರಾಡಿದ ಡಿಪಿಐಐಟಿ ಕಾರ್ಯದರ್ಶಿ ಡಾ. ಗುರುಪ್ರಸಾದ್ ಮೋಹಪಾತ್ರಾ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ