AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸೇನಾಧಿಕಾರಿ ಹೆಸರಲ್ಲಿ ಮಹಿಳೆಯರನ್ನು ಮೆಚ್ಚಿಸಿ, ಡೇಟಿಂಗ್​​ಗೆ ಹೋಗುತ್ತಿದ್ದ ವ್ಯಕ್ತಿ ಬಂಧನ..
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 19, 2021 | 5:32 PM

ದೆಹಲಿ: ತಾನೊಬ್ಬ ಸೇನಾಧಿಕಾರಿ ಎಂದು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಅಕೌಂಟ್​ಗಳನ್ನು ಹೊಂದಿದ್ದ ಈ ವ್ಯಕ್ತಿ ತಾನೊಬ್ಬ ಆರ್ಮಿ ಆಫೀಸರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಈತನ ಹೆಸರು ದಿಲೀಪ್​ ಕುಮಾರ್​ ಎಂದಾಗಿದ್ದು ದೆಹಲಿಯ ಮೋಹನ್ ಗಾರ್ಡನ್​ನಲ್ಲಿರುವ ಸೈನಿಕ್ ಎನ್​ಕ್ಲೇವ್​ ನಿವಾಸಿಯಾಗಿದ್ದ. ಶಾಲೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆ ಹೊತ್ತಿಗೆ, ಅರ್ಚನಾ ರೆಡ್​ ಲೈಟ್​ ಗ್ರೇಟರ್​ ಕೈಲಾಶ್​​ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬರನ್ನು ಭೇಟಿಯಾಗಲು ಈ ಪ್ರದೇಶಕ್ಕೆ ಬಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈ ವೇಳೆ ಈತ ಸೇನಾ ಸಮವಸ್ತ್ರದಲ್ಲಿಯೇ ಇದ್ದ. ಹಾಗೇ ಒಂದು ನಕಲಿ ಐಡಿಯನ್ನೂ ಹೊಂದಿದ್ದ. ಆತನ ಮೊಬೈಲ್​ ಜತೆಗೆ ಫೇಕ್​ ಐಡಿ ಕಾರ್ಡ್​ನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಸೌತ್​​ನ ಡಿಸಿಪಿ ಅತುಲ್​ ಕುಮಾರ್​ ಠಾಕೂರ್​ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನೊಬ್ಬ ಸೇನಾ ಅಧಿಕಾರಿ, ಕ್ಯಾಪ್ಟನ್ ಶೇಖರ್​ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಅನೇಕ ವಾಟ್ಸ್​ಆ್ಯಪ್ ಗ್ರೂಪ್​​ಗಳಲ್ಲಿ ಸಕ್ರಿಯನಾಗಿದ್ದ. ಅಲ್ಲದೆ, ಒಂದಷ್ಟು ಅಂತಾರಾಷ್ಟ್ರೀಯ ನಂಬರ್​ಗಳಿಗೂ ಆಗಾ ಕರೆ ಮಾಡುತ್ತಿದ್ದ ಎಂಬುದು ಮೊಬೈಲ್​ ಚೆಕ್​ ಮಾಡಿದಾಗ ಬೆಳಕಿಗೆ ಬಂದಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಂದೂವರೆ ತಿಂಗಳು ಕೊರೊನಾ ವಿರುದ್ಧ ಹೋರಾಡಿದ ಡಿಪಿಐಐಟಿ ಕಾರ್ಯದರ್ಶಿ ಡಾ. ಗುರುಪ್ರಸಾದ್ ಮೋಹಪಾತ್ರಾ ನಿಧನ; ಪ್ರಧಾನಿ ಮೋದಿಯವರಿಂದ ಸಂತಾಪ

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ