AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಗಢ್​​ನಲ್ಲಿ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಅವಹೇಳನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು. 

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬಗ್ಗೆ ಅಪಹಾಸ್ಯ-ನಿಂದನೆ; ವಿಡಿಯೋ ವೈರಲ್ ಆಗುತ್ತಿದ್ದಂತೆ ವ್ಯಕ್ತಿಯನ್ನು ಅರೆಸ್ಟ್ ಮಾಡಿದ ಪೊಲೀಸ್​
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 19, 2022 | 9:43 AM

Share

ಭೋಪಾಲ್​: ಪ್ರಧಾನಿ ನರೇಂದ್ರ ಮೋದಿ ಮತ್ತು  ಗೃಹ ಸಚಿವ ಅಮಿತ್​ ಶಾ  ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದ ಮತ್ತು ಕೆಟ್ಟದಾಗಿ ಅಪಹಾಸ್ಯ ಮಾಡಿದ್ದ ವ್ಯಕ್ತಿಯೊಬ್ಬನನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.  ಈತ ಪ್ರಧಾನಿ ಮತ್ತು ಗೃಹ ಸಚಿವರನ್ನು ನಿಂದಿಸಿದ, ಅಪಹಾಸ್ಯ ಮಾಡಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಪೊಲೀಸರು ಆತನ ಪತ್ತೆ ಕಾರ್ಯ ಶುರು ಮಾಡಿದರು. ಇದೀಗ ಜಬಲ್​​ಪುರ್​​ನಲ್ಲಿ ಬಂಧಿಸಿದ್ದಾರೆ. ಬಂಧಿತನ ಹೆಸರು ಆದಿಲ್​ ಅಲಿ ಎಂದು ಹೇಳಲಾಗಿದ್ದು, ಇವನಿಗೆ 38ವರ್ಷ.  ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಬಗ್ಗೆ ಅವಹೇಳನ ಮಾಡಿದ್ದರಿಂದಲೇ ಬಂಧಿಸಿದ್ದಾಗಿ ಸ್ಥಳೀಯ ಎಸ್​ಪಿ ಸಿದ್ಧಾರ್ಥ್​ ಬಹುಗುಣ್​ ತಿಳಿಸಿದ್ದಾರೆ.

ಅಲಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್​ 153 (ಗಲಭೆಗೆ ಪ್ರಚೋದನೆ), ಸೆಕ್ಷನ್​ 294 ( ಅಶ್ಲೀಲ ಪದಗಳುಳ್ಳ ಹಾಡುಗಳನ್ನು ಹೇಳಿದ್ದು ಮತ್ತು ಕೃತ್ಯ ಎಸಗಿದ್ದು)ರಡಿಯಲ್ಲಿ ಕೇಸ್​ ದಾಖಲು ಮಾಡಲಾಗಿದೆ. ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಅಜಂಗಢ್​​ನಲ್ಲಿ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಅವರನ್ನು ಅವಹೇಳನ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.  ಅಂದಹಾಗೇ, ಇವರು ಸಹಾಯಕ ಪ್ರಾಧ್ಯಾಪಕರಾಗಿದ್ದು, ರಾಜಕೀಯ ಪಕ್ಷವೊಂದರ ಜತೆಗೆ ಗುರುತಿಸಿಕೊಂಡಿದ್ದರು. ಹಾಗೇ, ಆ ಪಕ್ಷದ ಪರವಾಗಿ ಸಾರ್ವಜನಿಕ ಸಂಪರ್ಖ ಸಭೆಗಳು, ಪ್ರಚಾರಗಳಲ್ಲಿ ಪಾಲ್ಗೊಳ್ಳುತ್ತಿದ್ದರು.

ಇದನ್ನೂ ಓದಿ: ಸೌತ್​ ಚಿತ್ರಗಳ ಎದುರು ಬಾಲಿವುಡ್​ ಎಡವಿದ್ದು ಎಲ್ಲಿ? ಉತ್ತರ ಹುಡುಕಿದ ‘ಕೆಜಿಎಫ್​ 2’ ಅಧೀರ ಸಂಜಯ್​ ದತ್​

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ