AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ದಳ್ಳುರಿ: ಪೇದೆ ಮೇಲೆ ಗುಂಡು ಹಾರಿಸಿದ್ದ ಪುಂಡ ಅರೆಸ್ಟ್

ದೆಹಲಿ: ಪೌರತ್ವದ ಕಿಚ್ಚಿಗೆ ದೆಹಲಿ ಧಗ ಧಗಿಸಿಬಿಟ್ತು. ಅಮಾಯಕರಾಗಿದ್ದ 47 ಮಂದಿಯನ್ನ ಹಿಂಸಾಚಾರ ಬಲಿ ಪಡೆದುಬಿಡ್ತು. ಸದ್ಯ ದೆಹಲಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಹಿಂಸಾಚಾರದ ವೇಳೆ ಗುಂಡುಹಾರಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಖಾಕಿ ಬಲೆಗೆ ಬಿದ್ದಾನೆ! ಶಾಂತವಾಗಿದ್ದ ದೆಹಲಿಯನ್ನು ದುಷ್ಕರ್ಮಿಗಳು ದಂಗೆಬ್ಬಿಸಿಬಿಟ್ರು. ಸಿಎಎ ಹೋರಾಟದ ಹೆಸ್ರಲ್ಲಿ ಕಿಚ್ಚು ಹಚ್ಚಿಬಿಟ್ರು. ಜನರ ಪ್ರಾಣವನ್ನೂ ಲೆಕ್ಕಿಸದೇ ಹಿಂಸಾಚಾರ ನಡೆಸಿ ವಿಕೃತಿ ಮೆರೆದು ಬಿಟ್ರು. ಸಾರ್ವಜನಿಕ ಆಸ್ತಿಪಾಸ್ತಿ ಎಲ್ಲವನ್ನೂ ಹಾಳುಗೆಡವಿದ್ರು. ಇಷ್ಟೆಲ್ಲಾ ಮಾಡಿದ ದುಷ್ಕರ್ಮಿಗಳಿಗೆ ಈಗ ನಡುಕ […]

ದೆಹಲಿ ದಳ್ಳುರಿ: ಪೇದೆ ಮೇಲೆ ಗುಂಡು ಹಾರಿಸಿದ್ದ ಪುಂಡ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 04, 2020 | 7:19 AM

Share

ದೆಹಲಿ: ಪೌರತ್ವದ ಕಿಚ್ಚಿಗೆ ದೆಹಲಿ ಧಗ ಧಗಿಸಿಬಿಟ್ತು. ಅಮಾಯಕರಾಗಿದ್ದ 47 ಮಂದಿಯನ್ನ ಹಿಂಸಾಚಾರ ಬಲಿ ಪಡೆದುಬಿಡ್ತು. ಸದ್ಯ ದೆಹಲಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಹಿಂಸಾಚಾರದ ವೇಳೆ ಗುಂಡುಹಾರಿಸಿ, ಪೊಲೀಸರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಖಾಕಿ ಬಲೆಗೆ ಬಿದ್ದಾನೆ!

ಶಾಂತವಾಗಿದ್ದ ದೆಹಲಿಯನ್ನು ದುಷ್ಕರ್ಮಿಗಳು ದಂಗೆಬ್ಬಿಸಿಬಿಟ್ರು. ಸಿಎಎ ಹೋರಾಟದ ಹೆಸ್ರಲ್ಲಿ ಕಿಚ್ಚು ಹಚ್ಚಿಬಿಟ್ರು. ಜನರ ಪ್ರಾಣವನ್ನೂ ಲೆಕ್ಕಿಸದೇ ಹಿಂಸಾಚಾರ ನಡೆಸಿ ವಿಕೃತಿ ಮೆರೆದು ಬಿಟ್ರು. ಸಾರ್ವಜನಿಕ ಆಸ್ತಿಪಾಸ್ತಿ ಎಲ್ಲವನ್ನೂ ಹಾಳುಗೆಡವಿದ್ರು. ಇಷ್ಟೆಲ್ಲಾ ಮಾಡಿದ ದುಷ್ಕರ್ಮಿಗಳಿಗೆ ಈಗ ನಡುಕ ಶುರುವಾಗಿದೆ. ಯಾಕಂದ್ರೆ, ದೆಹಲಿ ಪೊಲೀಸ್ರು ಹಿಂಸಾಚಾರ ನಡೆಸಿದವರನ್ನು ಹುಡುಕಿ ಹುಡುಕಿ ಬಂಧಿಸುತ್ತಿದ್ದಾರೆ.

ಹಿಂಸಾಚಾರ ನಡೆಸಿದವರ ಜನ್ಮ ಜಾಲಾಡುತ್ತಿದೆ ಖಾಕಿ! ಈಶಾನ್ಯ ದೆಹಲಿಯಲ್ಲಿ ಹಿಂದೆಂದೂ ಕಂಡೂ ಕೇಳರಿಯದ ಹಿಂಸಾಚಾರ ನಡೆದು ಬಿಡ್ತು. ಆ ಹಿಂಸಾಚಾರಕ್ಕೆ 47 ಮಂದಿ ಪ್ರಾಣ ಬಿಟ್ಟಿದ್ದು, ದೆಹಲಿಯ ವಿವಿಧ ಆಸ್ಪತ್ರೆಗಳಲ್ಲಿ 200ಕ್ಕೂ ಹೆಚ್ಚು ಜನ ಗಾಯದಿಂದ ನರಳುತ್ತಿದ್ದಾರೆ. ಸಾವಿರಾರು ಜನ ಸರ್ವಸ್ವವನ್ನೂ ಕಳೆದುಕೊಂಡಿದ್ದು, ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿದ ಖಾಕಿ, ಈಗ ಹಿಂಸಾಚಾರ ನಡೆಸಿದವರ ಬೆನ್ನು ಬಿದ್ದಿದೆ. ಅವರ ಇಂಚಿಂಚೂ ಜನ್ಮ ಜಾಲಾಡುತ್ತಿದೆ.

‘ಗಲಭೆ’ಯ ಬೆನ್ನುಬಿದ್ದ ಖಾಕಿ: ದೆಹಲಿಯ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಇದುವರೆಗೂ 1,300 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿವಿಧ ಠಾಣೆಗಳಲ್ಲಿ ಒಟ್ಟು 369 ಎಫ್​ಐಆರ್ ದಾಖಲಾಗಿದೆ. ಈಶಾನ್ಯ ದೆಹಲಿಯ ಜಫ್ರಾಬಾದ್, ಚಾಂದ್ ಬಾಗ್, ಶಿವ ವಿಹಾರ್ ಹಾಗೂ ಯಮುನಾ ವಿಹಾರ್​ನಲ್ಲಿ ಇನ್ನೂ ಪ್ರತಿಭಟನೆಯ ಬಿಸಿ ತಣ್ಣಗಾಗಿಲ್ಲ. ಹೀಗಾಗಿ, ಭದ್ರತೆಗಾಗಿ ಸಿಆರ್​ಪಿಎಫ್ ಹಾಗೂ ಸಿಐಎಸ್ಎಫ್ ತುಗಡಿ ನಿಯೋಜಿಸಿ ಹದ್ದಿನ ಕಣ್ಣಿಡಲಾಗಿದೆ.

ಪೇದೆ ಮೇಲೆ ಗುಂಡು ಹಾರಿಸಿದ್ದ ಪುಂಡ ಅರೆಸ್ಟ್: ದೆಹಲಿಯ ಮೌಜ್​ಪುರದಲ್ಲಿ ಪ್ರತಿಭಟನೆ ವೇಳೆ ಪೊಲೀಸ್ ಪೇದೆ ದೀಪ್ ದಹಿಯಾ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದ.. ಫೆಬ್ರವರಿ 24ರಂದು ನಡೆದ ಹಿಂಸಾಚಾರದ ವೇಳೆ ಕೆಂಪು ಬಣ್ಣದ ಟೀ ಶರ್ಟ್ ಧರಿಸಿದ್ದ ಈತ, ಗುಂಡು ಹಾರಿಸಿ ದೇಶಾದ್ಯಂತ ಸುದ್ದಿಯಾಗಿದ್ದ.

ಈತನ ಪತ್ತೆಗಾಗಿ ವಿಶೇಷ ಘಟಕವನ್ನು ರಚಿಸಲಾಗಿತ್ತು. ದೆಹಲಿ, ಪಂಜಾಬ್​, ಉತ್ತರ ಪ್ರದೇಶದ ಪೊಲೀಸರ ತಂಡ ಹಗಲು ರಾತ್ರಿ ಈತನಿಗಾಗಿ ಹುಡುಕಾಟ ನಡೆಸಿದ್ರು. ಆದ್ರೀಗ ದೆಹಲಿ ಕ್ರೈಂ ಬ್ರಾಂಚ್ ನ ವಿಶೇಷ ತಂಡ, ಉತ್ತರಪ್ರದೇಶದ ಬರೇಲಿಯಲ್ಲಿ ಬಂಧಿಸಿದ್ದಾರೆ.

ಸದ್ಯ ಶಾರುಖ್ ಮನೆ ಉಸ್ಮಾನ್ ಪುರದ ಅರವಿಂದ ನಗರದ ಸ್ಟ್ರೀಟ್ ನಂಬರ್ 5U-108ನಲ್ಲಿದ್ದು, ಸದ್ಯ ಬೀಗ ಜಡಿದಿದೆ. ಶಾರುಖ್ ಡ್ರಗ್ ಮಾಫಿಯಾಕ್ಕೋಸ್ಕರ ಕೆಲಸ ಮಾಡುತ್ತಿದ್ದಾನೆ ಅಂತಾ ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಈ ಬಗ್ಗೆ ಪೊಲೀಸ್ರಿ ತನಿಖೆ ನಡೆಸ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​