AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ

ವೈದ್ಯ ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ
ವೈದ್ಯರಿಗೆ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ
shruti hegde
|

Updated on: Apr 22, 2021 | 4:12 PM

Share

ಮುಂಬೈ: ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಹಾರಾಷ್ಟ್ರದ ನಂದೇಡ್​ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ವಿಡಿಯೋ ಮೂಲಕ ಆರೋಪಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೌಸಾಹೇಬ್​ ಗೇಕ್ವಾಡ್​ ಅವರು ಏಪ್ರಿಲ್​ 20ರಂದು ನಂದೇಡ್​ನ ಜಿಲ್ಲಾ ಆಸ್ಪತ್ರೆಯ ಕೊವಿಡ್​ ವಾರ್ಡ್​ನಲ್ಲಿ ದಾಖಲಾದ ತಮ್ಮ ಸಂಬಂಧಿಯನ್ನು ನೋಡಲೆಂದು ಹೋಗಿದ್ದರು. ಆಸ್ಪತ್ರೆಯಲ್ಲಿದ್ದಾಗ ಅವರು ಜೋರಾಗಿ ಮಾತನಾಡಲು ಪ್ರಾರಂಭಿಸಿದರು. ಇದರಿಂದಾಗಿ ಇತರ ರೋಗಿಗಳ ಕುಟುಂಬಸ್ಥರು ಈ ಕುರಿತಂತೆ ಆಕ್ಷೇಪಿಸಿದರು. ಇದರಿಂದಾಗಿ ಗೇಕ್ವಾಡ್​ ಅವರು ವೈದ್ಯರ ಬಳಿ ಈ ಕುರಿತಂತೆ ಜೋರಾಗಿ ಮಾತನಾಡುತ್ತಾ, ಉಳಿದ ರೋಗಿಗಳ ಸಂಬಂಧಿಕರ ಬಳಿ ಜಗಳವಾಡಲು ಪ್ರಾರಂಭಿಸಿದರು.

ಗೇಕ್ವಾಡ್​, ಚಾಕುವನ್ನು ಹಿಡಿದು ವೈದ್ಯರ ಮೇಲೆ ಹಲ್ಲೆ ಮಾಡಲು ಮುಂದಾದರು. ತಕ್ಷಣವೇ ಅಸ್ಪತ್ರೆಯ ಸಿಬ್ಬಂದಿ ಆರೋಪಿಯನ್ನು ತಡೆ ಹಿಡಿದಿದ್ದಾರೆ. ಹಗರಣದಲ್ಲಿ ವೈದ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದು ತಿಳಿದು ಬಂದಿದೆ. ನಂತರ ವೈದ್ಯರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತಂತೆ ಕೊಲೆ ಯತ್ನ ಮಾಡಿರುವ ಗೇಕ್ವಾಡ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಇತರ ಜಿಲ್ಲೆಗಳಂತೆಯೇ ನಾಂದೇಡ್​ ಜಿಲ್ಲೆ ಕೂಡಾ ಕೊವಿಡ್​ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರವು ಶೇ.16.36ರಷ್ಟು ಪಾಸಿಟಿವ್​ ಪ್ರಕರಣಗಳನ್ನು ವರದಿ ಮಾಡಿದೆ. ಪ್ರಸ್ತುತದಲ್ಲಿ ಒಟ್ಟು 40,27,827 ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಕೊರತೆ: ಮಹಾರಾಷ್ಟ್ರಕ್ಕೆ 17 ಲಕ್ಷ ಡೋಸ್ ಕಳುಹಿಸಲು ಕೇಂದ್ರ ಸರ್ಕಾರ ನಿರ್ಧಾರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!