AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ

ವೈದ್ಯ ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಶಾಂತಿಯಿಂದಿರಲು ಹೇಳಿದ್ದಕ್ಕೆ ವೈದ್ಯರನ್ನೇ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ
ವೈದ್ಯರಿಗೆ ಚಾಕುವಿನಿಂದ ಚುಚ್ಚಲು ಹೊರಟ ವ್ಯಕ್ತಿ
shruti hegde
|

Updated on: Apr 22, 2021 | 4:12 PM

Share

ಮುಂಬೈ: ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಹಾರಾಷ್ಟ್ರದ ನಂದೇಡ್​ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡ ವಿಡಿಯೋ ಮೂಲಕ ಆರೋಪಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭೌಸಾಹೇಬ್​ ಗೇಕ್ವಾಡ್​ ಅವರು ಏಪ್ರಿಲ್​ 20ರಂದು ನಂದೇಡ್​ನ ಜಿಲ್ಲಾ ಆಸ್ಪತ್ರೆಯ ಕೊವಿಡ್​ ವಾರ್ಡ್​ನಲ್ಲಿ ದಾಖಲಾದ ತಮ್ಮ ಸಂಬಂಧಿಯನ್ನು ನೋಡಲೆಂದು ಹೋಗಿದ್ದರು. ಆಸ್ಪತ್ರೆಯಲ್ಲಿದ್ದಾಗ ಅವರು ಜೋರಾಗಿ ಮಾತನಾಡಲು ಪ್ರಾರಂಭಿಸಿದರು. ಇದರಿಂದಾಗಿ ಇತರ ರೋಗಿಗಳ ಕುಟುಂಬಸ್ಥರು ಈ ಕುರಿತಂತೆ ಆಕ್ಷೇಪಿಸಿದರು. ಇದರಿಂದಾಗಿ ಗೇಕ್ವಾಡ್​ ಅವರು ವೈದ್ಯರ ಬಳಿ ಈ ಕುರಿತಂತೆ ಜೋರಾಗಿ ಮಾತನಾಡುತ್ತಾ, ಉಳಿದ ರೋಗಿಗಳ ಸಂಬಂಧಿಕರ ಬಳಿ ಜಗಳವಾಡಲು ಪ್ರಾರಂಭಿಸಿದರು.

ಗೇಕ್ವಾಡ್​, ಚಾಕುವನ್ನು ಹಿಡಿದು ವೈದ್ಯರ ಮೇಲೆ ಹಲ್ಲೆ ಮಾಡಲು ಮುಂದಾದರು. ತಕ್ಷಣವೇ ಅಸ್ಪತ್ರೆಯ ಸಿಬ್ಬಂದಿ ಆರೋಪಿಯನ್ನು ತಡೆ ಹಿಡಿದಿದ್ದಾರೆ. ಹಗರಣದಲ್ಲಿ ವೈದ್ಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದು ತಿಳಿದು ಬಂದಿದೆ. ನಂತರ ವೈದ್ಯರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತಂತೆ ಕೊಲೆ ಯತ್ನ ಮಾಡಿರುವ ಗೇಕ್ವಾಡ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಇತರ ಜಿಲ್ಲೆಗಳಂತೆಯೇ ನಾಂದೇಡ್​ ಜಿಲ್ಲೆ ಕೂಡಾ ಕೊವಿಡ್​ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅತಿ ಹೆಚ್ಚು ಹಾನಿಗೊಳಗಾದ ಮಹಾರಾಷ್ಟ್ರವು ಶೇ.16.36ರಷ್ಟು ಪಾಸಿಟಿವ್​ ಪ್ರಕರಣಗಳನ್ನು ವರದಿ ಮಾಡಿದೆ. ಪ್ರಸ್ತುತದಲ್ಲಿ ಒಟ್ಟು 40,27,827 ಪ್ರಕರಣಗಳು ವರದಿಯಾಗಿದೆ.

ಇದನ್ನೂ ಓದಿ: ಕೊವಿಡ್ ಲಸಿಕೆ ಕೊರತೆ: ಮಹಾರಾಷ್ಟ್ರಕ್ಕೆ 17 ಲಕ್ಷ ಡೋಸ್ ಕಳುಹಿಸಲು ಕೇಂದ್ರ ಸರ್ಕಾರ ನಿರ್ಧಾರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ