AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನ ಗೊರಕೆಗೆ ಬೇಸತ್ತ ಮಗನಿಂದ ತಂದೆಯ ಘೋರ ಹತ್ಯೆ, ಎಲ್ಲಿ?

ಲಕ್ನೋ: ತಂದೆಯ ಗೊರಕೆ ಕಾಟಕ್ಕೆ ಬೇಸತ್ತ ಮಗ ತನ್ನ ಅಪ್ಪನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯ ಸೌಧ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ರಾಮ್​ಸ್ವರೂಪ್​ ಮಗನಿಂದ ಹತನಾದ ದುರ್ದೈವಿ. ಸೌಧ ಗ್ರಾಮದ ನಿವಾಸಿಯಾದ ರಾಮ್​ಸ್ವರೂಪ್ ತನ್ನ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಾದ ನವೀನ್​ ಮತ್ತು ಮುಕೇಶ್​ ಜೊತೆ ವಾಸವಿದ್ದನು. ಈ ಹಿಂದೆ ಹಲವಾರು ಬಾರಿ ರಾಮ್ ​ಸ್ವರೂಪ್​ ಗೊರಕೆ ಹೊಡೆಯುವ ವಿಚಾರವಾಗಿ ಆತನ ದೊಡ್ಡ ಮಗ ನವೀನ್​ನೊಟ್ಟಿಗೆ ಗಲಾಟೆಗಳಾಗಿತ್ತು ಎಂದು […]

ಅಪ್ಪನ ಗೊರಕೆಗೆ ಬೇಸತ್ತ ಮಗನಿಂದ ತಂದೆಯ ಘೋರ ಹತ್ಯೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Aug 13, 2020 | 4:09 PM

Share

ಲಕ್ನೋ: ತಂದೆಯ ಗೊರಕೆ ಕಾಟಕ್ಕೆ ಬೇಸತ್ತ ಮಗ ತನ್ನ ಅಪ್ಪನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲೆಯ ಸೌಧ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 65 ವರ್ಷದ ರಾಮ್​ಸ್ವರೂಪ್​ ಮಗನಿಂದ ಹತನಾದ ದುರ್ದೈವಿ.

ಸೌಧ ಗ್ರಾಮದ ನಿವಾಸಿಯಾದ ರಾಮ್​ಸ್ವರೂಪ್ ತನ್ನ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಾದ ನವೀನ್​ ಮತ್ತು ಮುಕೇಶ್​ ಜೊತೆ ವಾಸವಿದ್ದನು. ಈ ಹಿಂದೆ ಹಲವಾರು ಬಾರಿ ರಾಮ್ ​ಸ್ವರೂಪ್​ ಗೊರಕೆ ಹೊಡೆಯುವ ವಿಚಾರವಾಗಿ ಆತನ ದೊಡ್ಡ ಮಗ ನವೀನ್​ನೊಟ್ಟಿಗೆ ಗಲಾಟೆಗಳಾಗಿತ್ತು ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳ ಹಿಂದೆ, ರಾಮ್​ಸ್ವರೂಪ್​ ಪತ್ನಿ ಹಾಗೂ ಕಿರಿಯ ಮಗ ಮುಕೇಶ್​ ತಮ್ಮ ನೆಂಟರ ಮನೆಗೆ ಹೋಗಿದ್ದರಂತೆ. ಈ ವೇಳೆ, ಕಳೆದ ಮಂಗಳವಾರ ರಾತ್ರಿಯಂದು ನವೀನ್​ ತನ್ನ ತಂದೆಯ ಜೊತೆ ಗೊರಕೆ ವಿಚಾರವಾಗಿ ಮತ್ತೊಮ್ಮೆ ತಗಾದೆ ತೆಗೆದಿದ್ದನಂತೆ. ಇಬ್ಬರ ನಡುವೆ ತೀವ್ರ ವಾಗ್ವಾದ ಸಂಭವಿಸಿದೆ. ಕೊನೆಗೆ, ನವೀನ್​ ಕೋಪದ ಕೈಗೆ ಬುದ್ಧಿ ಕೊಟ್ಟು ರಾಮ್ ​ಸ್ವರೂಪ್​ಗೆ ದೊಣ್ಣೆಯಿಂದ ಸಿಕ್ಕಾಪಟ್ಟೆ ಹೊಡೆದಿದ್ದಾನೆ.

ದೊಣ್ಣೆಯ ಏಟಿನಿಂದ ಕುಸಿದುಬಿದ್ದ ರಾಮ್ ​ಸ್ವರೂಪ್​ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಗ ನವೀನ್​ ಕೂಡಲೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇನ್ನು ಕಿರಿಯ ಮಗ ಮುಕೇಶ್​ ಮನೆಗೆ ಹಿಂದಿರುಗಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಇದೀಗ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ಪರಾರಿಯಾದ ಮುಕೇಶ್​ನ ಪತ್ತೆಹಚ್ಚಲು ಮುಂದಾಗಿದ್ದಾರೆ.

Published On - 3:04 pm, Thu, 13 August 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ