AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tenkasi: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ

ಪತ್ನಿ ಎದುರೇ ಪತಿ(Husband)ಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ. ತೆಂಕಸಿಯಲ್ಲಿ ಭೀಕರ ಹಿಂಸಾಚಾರ ನಡೆದಿತ್ತು. ಅಪರಿಚಿತ ಗುಂಪೊಂದು ಹೆಂಡತಿಯ ಎದುರೇ ಶಿರಚ್ಛೇದ ಮಾಡಿ, ತಲೆ ತೆಗೆದುಕೊಂಡು ಪರಾರಿಯಾಗಿದ್ದರು. ಅಪರಾಧ ಸ್ಥಳದಿಂದ ಸುಮಾರು 8 ಕಿ.ಮೀ ದೂರದಲ್ಲಿ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

Tenkasi: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ
ಸಾವು Image Credit source: CNBCTV18.COM
ನಯನಾ ರಾಜೀವ್
|

Updated on: Apr 18, 2025 | 12:12 PM

Share

ತೆಂಕಸಿ, ಏಪ್ರಿಲ್ 18: ಪತ್ನಿ ಎದುರೇ ಪತಿ(Husband)ಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ. ತೆಂಕಸಿಯಲ್ಲಿ ಭೀಕರ ಹಿಂಸಾಚಾರ ನಡೆದಿತ್ತು. ಅಪರಿಚಿತ ಗುಂಪೊಂದು ಹೆಂಡತಿಯ ಎದುರೇ ಶಿರಚ್ಛೇದ ಮಾಡಿ, ತಲೆ ತೆಗೆದುಕೊಂಡು ಪರಾರಿಯಾಗಿದ್ದರು. ಅಪರಾಧ ಸ್ಥಳದಿಂದ ಸುಮಾರು 8 ಕಿ.ಮೀ ದೂರದಲ್ಲಿ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು 35 ವರ್ಷದ ಕುಥಾಲಿಂಗಂ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿಯೊಂದಿಗೆ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು. ಪೊಲೀಸ್ ವರದಿಗಳ ಪ್ರಕಾರ ದಂಪತಿ ಏಪ್ರಿಲ್ 16ರಂದು ಸಂಜೆ ತಮ್ಮ ಹಳ್ಳಿಯಲ್ಲಿರುವ ಪಿಡಿಎಸ್ ಅಂಗಡಿಗೆ ಹೋಗಿದ್ದಾಗ ನಾಲ್ವರ ಗುಂಪೊಂದು ಅವರ ಮೇಲೆ ಹೊಂಚು ದಾಳಿ ನಡೆಸಿತ್ತು.

ಕುಥಾಲಿಂಗಂ ಅವರ ಮೇಲೆ ದಾಳಿ ನಡೆಸಿದಾಗ ಪತ್ನಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಅವರು ಆಕೆಯನ್ನು ತಳ್ಳಿ ಕುತ್ತಿಗೆಯನ್ನೇ ಕಡಿದಿದ್ದಾರೆ. ಆ ಗುಂಪು ಅವರ ಶಿರಚ್ಛೇದನ ಮಾಡಿ ತಲೆಯೊಂದಿಗೆ ಪರಾರಿಯಾಗಿತ್ತು.

ಇದನ್ನೂ ಓದಿ
Image
ಪ್ರೀತಿ-ಪ್ರೇಮವೆಂದು ಸುತ್ತಾಡಿ ಕೈಕೊಟ್ಟ ಪ್ರೇಯಸಿ:ಪ್ರಾಣಕಳೆದುಕೊಂಡ ಪ್ರಿಯಕರ
Image
ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದ ಅಫಾನ್
Image
ಪ್ರಿಯಕರ ಬೇರೊಬ್ಬಳ ಜತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ
Image
ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುರಂತ ಸಾವು!

ಮತ್ತಷ್ಟು ಓದಿ: ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ

ಗಾಬರಿಗೊಂಡ ಮಹಿಳೆ ತಕ್ಷಣ ತೆಂಕಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ, ಕಾಸಿಮಜೋರ್ಪುರಂನ ದೇವಾಲಯವೊಂದರ ಬಳಿ ಕತ್ತರಿಸಿದ ತಲೆ ಪತ್ತೆಯಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಮೃತದೇಹ ಮತ್ತು ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ತೆಂಕಾಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

ಇದು ಸೇಡಿಗಾಗಿ ಮಾಡಿದ ಕೊಲೆಯಾಗಿರಬಹುದು, 2023ರಲ್ಲಿ ದೇವಸ್ಥಾನದ ಬಳಿ ಒಂದು ಕೊಲೆ ನಡೆದಿತ್ತು, ಈ ವ್ಯಕ್ತಿ ಆ ಕೊಲೆಯಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ನಿಖರ ಕಾರಣವನ್ನು ತಿಳಿಯಬೇಕಾದರೆ ಆರೋಪಿಗಳು ಸಿಕ್ಕಿಬೀಳಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ