Tenkasi: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ

ಪತ್ನಿ ಎದುರೇ ಪತಿ(Husband)ಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ. ತೆಂಕಸಿಯಲ್ಲಿ ಭೀಕರ ಹಿಂಸಾಚಾರ ನಡೆದಿತ್ತು. ಅಪರಿಚಿತ ಗುಂಪೊಂದು ಹೆಂಡತಿಯ ಎದುರೇ ಶಿರಚ್ಛೇದ ಮಾಡಿ, ತಲೆ ತೆಗೆದುಕೊಂಡು ಪರಾರಿಯಾಗಿದ್ದರು. ಅಪರಾಧ ಸ್ಥಳದಿಂದ ಸುಮಾರು 8 ಕಿ.ಮೀ ದೂರದಲ್ಲಿ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

Tenkasi: ಪತ್ನಿ ಎದುರೇ ಪತಿಯ ಶಿರಚ್ಛೇದ, ದೇವಸ್ಥಾನದ ಬಳಿ ರುಂಡ ಪತ್ತೆ
ಸಾವು
Image Credit source: CNBCTV18.COM

Updated on: Apr 18, 2025 | 12:12 PM

ತೆಂಕಸಿ, ಏಪ್ರಿಲ್ 18: ಪತ್ನಿ ಎದುರೇ ಪತಿ(Husband)ಯ ಶಿರಚ್ಛೇದ ಮಾಡಿರುವ ಘಟನೆ ತಮಿಳುನಾಡಿನ ತೆಂಕಸಿ ಬಳಿ ನಡೆದಿದೆ. ಮನೆಯಿಂದ 8 ಕಿ.ಮೀ ದೂರದಲ್ಲಿರುವ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ. ತೆಂಕಸಿಯಲ್ಲಿ ಭೀಕರ ಹಿಂಸಾಚಾರ ನಡೆದಿತ್ತು. ಅಪರಿಚಿತ ಗುಂಪೊಂದು ಹೆಂಡತಿಯ ಎದುರೇ ಶಿರಚ್ಛೇದ ಮಾಡಿ, ತಲೆ ತೆಗೆದುಕೊಂಡು ಪರಾರಿಯಾಗಿದ್ದರು. ಅಪರಾಧ ಸ್ಥಳದಿಂದ ಸುಮಾರು 8 ಕಿ.ಮೀ ದೂರದಲ್ಲಿ ದೇವಸ್ಥಾನದ ಬಳಿ ರುಂಡ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು 35 ವರ್ಷದ ಕುಥಾಲಿಂಗಂ ಎಂದು ಗುರುತಿಸಲಾಗಿದೆ. ಅವರು ತಮ್ಮ ಪತ್ನಿಯೊಂದಿಗೆ ಕೀಳಪುಲಿಯೂರಿನಲ್ಲಿ ವಾಸಿಸುತ್ತಿದ್ದರು. ಪೊಲೀಸ್ ವರದಿಗಳ ಪ್ರಕಾರ ದಂಪತಿ ಏಪ್ರಿಲ್ 16ರಂದು ಸಂಜೆ ತಮ್ಮ ಹಳ್ಳಿಯಲ್ಲಿರುವ ಪಿಡಿಎಸ್ ಅಂಗಡಿಗೆ ಹೋಗಿದ್ದಾಗ ನಾಲ್ವರ ಗುಂಪೊಂದು ಅವರ ಮೇಲೆ ಹೊಂಚು ದಾಳಿ ನಡೆಸಿತ್ತು.

ಕುಥಾಲಿಂಗಂ ಅವರ ಮೇಲೆ ದಾಳಿ ನಡೆಸಿದಾಗ ಪತ್ನಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಅವರು ಆಕೆಯನ್ನು ತಳ್ಳಿ ಕುತ್ತಿಗೆಯನ್ನೇ ಕಡಿದಿದ್ದಾರೆ. ಆ ಗುಂಪು ಅವರ ಶಿರಚ್ಛೇದನ ಮಾಡಿ ತಲೆಯೊಂದಿಗೆ ಪರಾರಿಯಾಗಿತ್ತು.

ಇದನ್ನೂ ಓದಿ
ಪ್ರೀತಿ-ಪ್ರೇಮವೆಂದು ಸುತ್ತಾಡಿ ಕೈಕೊಟ್ಟ ಪ್ರೇಯಸಿ:ಪ್ರಾಣಕಳೆದುಕೊಂಡ ಪ್ರಿಯಕರ
ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದ ಅಫಾನ್
ಪ್ರಿಯಕರ ಬೇರೊಬ್ಬಳ ಜತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ
ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುರಂತ ಸಾವು!

ಮತ್ತಷ್ಟು ಓದಿ: ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ

ಗಾಬರಿಗೊಂಡ ಮಹಿಳೆ ತಕ್ಷಣ ತೆಂಕಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಪರಿಚಿತ ದಾಳಿಕೋರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಸ್ವಲ್ಪ ಸಮಯದ ನಂತರ, ಕಾಸಿಮಜೋರ್ಪುರಂನ ದೇವಾಲಯವೊಂದರ ಬಳಿ ಕತ್ತರಿಸಿದ ತಲೆ ಪತ್ತೆಯಾಗಿದೆ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ಮೃತದೇಹ ಮತ್ತು ತಲೆಯನ್ನು ಮರಣೋತ್ತರ ಪರೀಕ್ಷೆಗಾಗಿ ತೆಂಕಾಸಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

ಇದು ಸೇಡಿಗಾಗಿ ಮಾಡಿದ ಕೊಲೆಯಾಗಿರಬಹುದು, 2023ರಲ್ಲಿ ದೇವಸ್ಥಾನದ ಬಳಿ ಒಂದು ಕೊಲೆ ನಡೆದಿತ್ತು, ಈ ವ್ಯಕ್ತಿ ಆ ಕೊಲೆಯಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ನಿಖರ ಕಾರಣವನ್ನು ತಿಳಿಯಬೇಕಾದರೆ ಆರೋಪಿಗಳು ಸಿಕ್ಕಿಬೀಳಬೇಕಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us