AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ವ್ಯಕ್ತಿ ತನ್ನ 45 […]

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 04, 2020 | 7:22 PM

Share

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ 45 ವರ್ಷದ ಹೆಂಡತಿಯನ್ನು ಬುಧವಾರ ಮುಂಜಾನೆ ಶಿರಚ್ಛೇದನ ಮಾಡಿದನೆಂದು ಆರೋಪಿಸಲಾಗಿದೆ. ನಂತರ ಆತ ತನ್ನ ಮನೆಯ ಪೂಜಾ ಕೋಣೆಯಲ್ಲಿ ಹೆಂಡತಿಯ ತಲೆ ಮತ್ತು ಮುಂಡವನ್ನು ಪ್ರತ್ಯೇಕವಾಗಿ ಹೂತು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಕ್ಕಳ ಪ್ರಕಾರ, ಆರೋಪಿ ತನ್ನ ನೆಚ್ಚಿನ ದೇವರನ್ನು ಮೆಚ್ಚಿಸಲು ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ. ಆತ ಕೆಲವು ದಿನಗಳ ಹಿಂದೆ ಮೇಕೆಯನ್ನು ಕೊಂದು, ಮೇಕೆಯ ದೇಹವನ್ನು ಪೂಜಾ ಕೋಣೆಯಲ್ಲಿ ಹೂತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ