AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ. ಈ ವ್ಯಕ್ತಿ ತನ್ನ 45 […]

ದೇವರ ಮೆಚ್ಚಿಸಲು ಹೆಂಡತಿಯ ಶಿರಚ್ಛೇದ ಮಾಡಿದ ಭೂಪ, ಮುಂದೆ ಮಾಡಿದ್ದೇನು?
ಪ್ರಾತಿನಿಧಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 04, 2020 | 7:22 PM

Share

ಮಧ್ಯಪ್ರದೇಶ: ದೇವರನ್ನು ಮೆಚ್ಚಿಸಲು 50 ವರ್ಷದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಶಿರಚ್ಛೇದನ ಮಾಡಿ, ಶವವನ್ನು ತನ್ನ ಮನೆಯ ಪೂಜಾ ಕೋಣೆಯಲ್ಲಿ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.

ಸಿಂಗ್ರೌಲಿ ಜಿಲ್ಲಾ ಕೇಂದ್ರದಿಂದ 25 ಕಿ.ಮೀ ದೂರದಲ್ಲಿರುವ ಬಸೌಡಾ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಆರೋಪಿಯ ಇಬ್ಬರು ಮಕ್ಕಳು ಈ ವಿಚಾರವನ್ನು ಪೊಲೀಸರಿಗೆ ತಿಳಿಸಲಾಗಿ, ಆರೋಪಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ 45 ವರ್ಷದ ಹೆಂಡತಿಯನ್ನು ಬುಧವಾರ ಮುಂಜಾನೆ ಶಿರಚ್ಛೇದನ ಮಾಡಿದನೆಂದು ಆರೋಪಿಸಲಾಗಿದೆ. ನಂತರ ಆತ ತನ್ನ ಮನೆಯ ಪೂಜಾ ಕೋಣೆಯಲ್ಲಿ ಹೆಂಡತಿಯ ತಲೆ ಮತ್ತು ಮುಂಡವನ್ನು ಪ್ರತ್ಯೇಕವಾಗಿ ಹೂತು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ಮಕ್ಕಳ ಪ್ರಕಾರ, ಆರೋಪಿ ತನ್ನ ನೆಚ್ಚಿನ ದೇವರನ್ನು ಮೆಚ್ಚಿಸಲು ತನ್ನ ಹೆಂಡತಿಯನ್ನು ಕೊಂದಿದ್ದಾನೆ ಎಂಬುದು ತಿಳಿದು ಬಂದಿದೆ. ಆತ ಕೆಲವು ದಿನಗಳ ಹಿಂದೆ ಮೇಕೆಯನ್ನು ಕೊಂದು, ಮೇಕೆಯ ದೇಹವನ್ನು ಪೂಜಾ ಕೋಣೆಯಲ್ಲಿ ಹೂತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!