ದಾವೂದ್​ ಇಬ್ರಾಹಿಂ ಗ್ಯಾಂಗ್​ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯಿಂದ ಪ್ರಧಾನಿ ಮೋದಿ, ಯೋಗಿಗೆ ಕೊಲೆ ಬೆದರಿಕೆ

|

Updated on: Nov 21, 2023 | 2:15 PM

ಭೂಗತ ಪಾತಕಿ ದಾವೂದ್ ಇಬ್ರಾಹಿಂ(Dawood Ibrahim) ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹತ್ಯೆಗೆ ಸಂಚು ರೂಪಿಸಲು ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿತ್ತು ಎಂದು ಆರೋಪಿ ಈ ಕರೆಯಲ್ಲಿ ಹೇಳಿಕೊಂಡಿದ್ದಾನೆ.

ದಾವೂದ್​ ಇಬ್ರಾಹಿಂ ಗ್ಯಾಂಗ್​ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯಿಂದ ಪ್ರಧಾನಿ ಮೋದಿ, ಯೋಗಿಗೆ ಕೊಲೆ ಬೆದರಿಕೆ
ನರೇಂದ್ರ ಮೋದಿ
Image Credit source: Hindustan Times
Follow us on

ಭೂಗತ ಪಾತಕಿ ದಾವೂದ್ ಇಬ್ರಾಹಿಂ(Dawood Ibrahim) ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆದರಿಕೆ ಕರೆ ಮಾಡಿದ್ದಾನೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಹತ್ಯೆಗೆ ಸಂಚು ರೂಪಿಸಲು ದಾವೂದ್ ಗ್ಯಾಂಗ್ ತನಗೆ ಸೂಚನೆ ನೀಡಿತ್ತು ಎಂದು ಆರೋಪಿ ಈ ಕರೆಯಲ್ಲಿ ಹೇಳಿಕೊಂಡಿದ್ದಾನೆ.

ಮಂಗಳವಾರ ಮಾಹಿತಿ ನೀಡಿದ ಪೊಲೀಸರು, ಕರೆ ಮಾಡಿದವರು ಜೆಜೆ ಆಸ್ಪತ್ರೆಯನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಿದ್ದಾರೆ. ಪೊಲೀಸರು ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಮತ್ತು ಆತನನ್ನೂ ಬಂಧಿಸಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ಹೆಸರಿನಲ್ಲಿ ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಅಕ್ಟೋಬರ್‌ನಲ್ಲಿಯೂ ಮುಂಬೈ ಪೊಲೀಸರಿಗೆ ಇದೇ ರೀತಿಯ ಬೆದರಿಕೆ ಸಂದೇಶ ಬಂದಿತ್ತು. 500 ಕೋಟಿ ಪಾವತಿಸಲು ಮತ್ತು ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ವಿಫಲವಾದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಹಮದಾಬಾದ್‌ನಲ್ಲಿರುವ ಅವರ ಹೆಸರಿನ ಕ್ರೀಡಾಂಗಣವನ್ನು ಸ್ಫೋಟಿಸಲಾಗುವುದು ಎಂದು ಅದನ್ನು ಕಳುಹಿಸುವ ವ್ಯಕ್ತಿ ಬೆದರಿಕೆ ಹಾಕಿದ್ದ.

ಮತ್ತಷ್ಟು ಓದಿ: ಪ್ರಧಾನಿ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ

ಭಯೋತ್ಪಾದಕ ಗುಂಪು ಈಗಾಗಲೇ ದಾಳಿ ನಡೆಸಲು ತನ್ನ ಜನರನ್ನು ನಿಯೋಜಿಸಿದೆ ಎಂದು ಇಮೇಲ್‌ನಲ್ಲಿ ಬರೆಯಲಾಗಿತ್ತು. ಆಗಸ್ಟ್‌ನಲ್ಲಿ ಕೇರಳ ಪೊಲೀಸರು ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿ ಮೋದಿಯವರ ಮೇಲೆ ಆತ್ಮಹತ್ಯಾ ದಾಳಿಯ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 2:14 pm, Tue, 21 November 23