AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪಿಗೆ ನೀಡದ್ದಕ್ಕೆ.. ಪ್ರೇಯಸಿಯ ಕುಟುಂಬಸ್ಥರನ್ನು ಬರ್ಬರವಾಗಿ ಹತ್ಯೆಗೈದ ಯುವಕ, ಯಾವೂರಲ್ಲಿ?

ಇಲ್ಲೋರ್ವ ಯುವಕ ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಪ್ರೇಯಸಿಯ ಕುಟುಂಬದವರನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆಗೆ ಒಪ್ಪಿಗೆ ನೀಡದ್ದಕ್ಕೆ.. ಪ್ರೇಯಸಿಯ ಕುಟುಂಬಸ್ಥರನ್ನು ಬರ್ಬರವಾಗಿ ಹತ್ಯೆಗೈದ ಯುವಕ, ಯಾವೂರಲ್ಲಿ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 5:36 PM

Share

ಮುಂಬೈ: ಯುವ ಪ್ರೇಮಿಗಳ ಪ್ರೀತಿಗೆ ಕುಟುಂಬದವರಿಂದ ವಿರೋಧ ವ್ಯಕ್ತವಾಗಿ ಸಂಬಂಧಗಳೇ ಮುರಿದು ಬಿದ್ದ ಸಾಕಷ್ಟು ಉದಾಹರಣೆಗಳಿದೆ. ಕೆಲವೊಮ್ಮೆ ತಮ್ಮ ಪ್ರೀತಿ ಒಪ್ಪದಿದ್ದಾಗ ಪ್ರೇಮಿಗಳು ತಮ್ಮತಮ್ಮ ಕುಟುಂಬದವರಿಗೆ ಮನವರಿಕೆ ಮಾಡಿಕೊಟ್ಟು ಮದುವೆ ಆಗಿರುವುದನ್ನೂ ಸಹ ನೋಡಿದ್ದೇವೆ. ಆದರೆ, ಇಲ್ಲೋರ್ವ ಯುವಕ ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಪ್ರೇಯಸಿಯ ಕುಟುಂಬದವರನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದೆ. ವರ್ಷದ ಹಿಂದೆ ಮೋಯಿನ್​ ಖಾನ್​ ಎಂಬಾತನಿಗೆ ಇನ್​ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳ ಪರಿಚಯ ಆಗಿತ್ತು. ಪರಿಚಯ ಗೆಳೆತನಕ್ಕೆ ತಿರುಗಿ ನಂತರ ಪ್ರೀತಿಯಾಗಿ ಬದಲಾಗಿತ್ತು.ಈ ನಡುವೆ, ಈತ ನನ್ನ ಆಪ್ತ ಗೆಳೆಯ ಎಂದು ಯುವತಿ ಕುಟುಂಬದವರಿಗೆ ಪರಿಚಯ ಮಾಡಿಕೊಟ್ಟಿದ್ದಳು. ಆದರೆ, ಕ್ರಮೇಣ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಹುಡುಗಿಯ ಕುಟುಂಬಸ್ಥರಿಗೆ ಗೊತ್ತಾಯಿತು. ಇಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ, ಆತನನ್ನು ಮದುವೆ ಆಗಲು ಒಪ್ಪಿಗೆ ನೀಡದ ಯುವತಿಯ ಕುಟುಂಬದವರು ಆಕೆಯ ಮೊಬೈಲ್​ ಕಸಿದು, ತಮ್ಮ ಸಂಬಂಧಿಕರ ಮನೆಗೆ ಕಳುಹಿಸಿದ್ದರು.

ಇದರಿಂದ ಸಿಟ್ಟಾದ ಮೋಯಿನ್​, ಪ್ರೀತಿಸಿದಾಕೆಯ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ, ಯುವತಿಯ ಅಜ್ಜಿ ಮದುವೆಗೆ ಒಪ್ಪದಿದ್ದಾಗ, ಆಕೆಯನ್ನು ಹತ್ಯೆ ಮಾಡಿದ್ದಾನೆ. ಈ ವೇಳೆ, ಅಜ್ಜಿಯನ್ನು ರಕ್ಷಿಸಲು ಬಂದ ಯುವತಿಯ ತಮ್ಮನನ್ನು ಕೂಡ ಕೊಲೆಗೈದಿದ್ದಾನೆ.

ಆತ್ಮಹತ್ಯೆಗೆ ಶರಣಾದ ಮೋಯಿನ್​ ಇಬ್ಬರನ್ನು ಕೊಲೆ ಮಾಡಿದ ನಂತರ ಮೋಯಿನ್​ಗೆ ತನ್ನ ತಪ್ಪಿನ ಅರಿವಾಗಿದೆ. ಅಲ್ಲದೆ, ತಾನು ಪೊಲೀಸರಿಗೆ ಸಿಕ್ಕಿ ಬೀಳೋದು ಖಚಿತ ಅನ್ನೋದು ಸಹ ಗೊತ್ತಾಗಿದೆ. ಹೀಗಾಗಿ, ಮೋಯಿನ್​ ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!