AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪಿಗೆ ನೀಡದ್ದಕ್ಕೆ.. ಪ್ರೇಯಸಿಯ ಕುಟುಂಬಸ್ಥರನ್ನು ಬರ್ಬರವಾಗಿ ಹತ್ಯೆಗೈದ ಯುವಕ, ಯಾವೂರಲ್ಲಿ?

ಇಲ್ಲೋರ್ವ ಯುವಕ ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಪ್ರೇಯಸಿಯ ಕುಟುಂಬದವರನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆಗೆ ಒಪ್ಪಿಗೆ ನೀಡದ್ದಕ್ಕೆ.. ಪ್ರೇಯಸಿಯ ಕುಟುಂಬಸ್ಥರನ್ನು ಬರ್ಬರವಾಗಿ ಹತ್ಯೆಗೈದ ಯುವಕ, ಯಾವೂರಲ್ಲಿ?
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 11, 2020 | 5:36 PM

Share

ಮುಂಬೈ: ಯುವ ಪ್ರೇಮಿಗಳ ಪ್ರೀತಿಗೆ ಕುಟುಂಬದವರಿಂದ ವಿರೋಧ ವ್ಯಕ್ತವಾಗಿ ಸಂಬಂಧಗಳೇ ಮುರಿದು ಬಿದ್ದ ಸಾಕಷ್ಟು ಉದಾಹರಣೆಗಳಿದೆ. ಕೆಲವೊಮ್ಮೆ ತಮ್ಮ ಪ್ರೀತಿ ಒಪ್ಪದಿದ್ದಾಗ ಪ್ರೇಮಿಗಳು ತಮ್ಮತಮ್ಮ ಕುಟುಂಬದವರಿಗೆ ಮನವರಿಕೆ ಮಾಡಿಕೊಟ್ಟು ಮದುವೆ ಆಗಿರುವುದನ್ನೂ ಸಹ ನೋಡಿದ್ದೇವೆ. ಆದರೆ, ಇಲ್ಲೋರ್ವ ಯುವಕ ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಪ್ರೇಯಸಿಯ ಕುಟುಂಬದವರನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದೆ. ವರ್ಷದ ಹಿಂದೆ ಮೋಯಿನ್​ ಖಾನ್​ ಎಂಬಾತನಿಗೆ ಇನ್​ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳ ಪರಿಚಯ ಆಗಿತ್ತು. ಪರಿಚಯ ಗೆಳೆತನಕ್ಕೆ ತಿರುಗಿ ನಂತರ ಪ್ರೀತಿಯಾಗಿ ಬದಲಾಗಿತ್ತು.ಈ ನಡುವೆ, ಈತ ನನ್ನ ಆಪ್ತ ಗೆಳೆಯ ಎಂದು ಯುವತಿ ಕುಟುಂಬದವರಿಗೆ ಪರಿಚಯ ಮಾಡಿಕೊಟ್ಟಿದ್ದಳು. ಆದರೆ, ಕ್ರಮೇಣ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಹುಡುಗಿಯ ಕುಟುಂಬಸ್ಥರಿಗೆ ಗೊತ್ತಾಯಿತು. ಇಬ್ಬರ ಧರ್ಮ ಬೇರೆ ಬೇರೆ. ಹೀಗಾಗಿ, ಆತನನ್ನು ಮದುವೆ ಆಗಲು ಒಪ್ಪಿಗೆ ನೀಡದ ಯುವತಿಯ ಕುಟುಂಬದವರು ಆಕೆಯ ಮೊಬೈಲ್​ ಕಸಿದು, ತಮ್ಮ ಸಂಬಂಧಿಕರ ಮನೆಗೆ ಕಳುಹಿಸಿದ್ದರು.

ಇದರಿಂದ ಸಿಟ್ಟಾದ ಮೋಯಿನ್​, ಪ್ರೀತಿಸಿದಾಕೆಯ ಮನೆಗೆ ಬಂದು ಗಲಾಟೆ ಮಾಡಿದ್ದಾನೆ. ಈ ವೇಳೆ, ಯುವತಿಯ ಅಜ್ಜಿ ಮದುವೆಗೆ ಒಪ್ಪದಿದ್ದಾಗ, ಆಕೆಯನ್ನು ಹತ್ಯೆ ಮಾಡಿದ್ದಾನೆ. ಈ ವೇಳೆ, ಅಜ್ಜಿಯನ್ನು ರಕ್ಷಿಸಲು ಬಂದ ಯುವತಿಯ ತಮ್ಮನನ್ನು ಕೂಡ ಕೊಲೆಗೈದಿದ್ದಾನೆ.

ಆತ್ಮಹತ್ಯೆಗೆ ಶರಣಾದ ಮೋಯಿನ್​ ಇಬ್ಬರನ್ನು ಕೊಲೆ ಮಾಡಿದ ನಂತರ ಮೋಯಿನ್​ಗೆ ತನ್ನ ತಪ್ಪಿನ ಅರಿವಾಗಿದೆ. ಅಲ್ಲದೆ, ತಾನು ಪೊಲೀಸರಿಗೆ ಸಿಕ್ಕಿ ಬೀಳೋದು ಖಚಿತ ಅನ್ನೋದು ಸಹ ಗೊತ್ತಾಗಿದೆ. ಹೀಗಾಗಿ, ಮೋಯಿನ್​ ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಮದುವೆಗೆ ಒಪ್ಪದ ಹಿರಿಯರು: ಆತ್ಮಹತ್ಯೆಗೆ ಶರಣಾದ ಜೋಡಿ ಹಕ್ಕಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ