AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ, ಸ್ಥಿತಿ ಗಂಭೀರ

ಬೆಳಗ್ಗೆ ಜಾಗಿಂಗ್​​ಗೆ ಹೋದ ವ್ಯಕ್ತಿ ಮೇಲೆ ಹಲವು ಬಾರಿ ಗುಂಡಿನ ದಾಳಿ(Firing) ನಡೆಸಿರುವ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದು 55 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಖ್‌ಪತ್ ಸಿಂಗ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಜಾಗಿಂಗ್ ಮಾಡುತ್ತಿದ್ದಾಗ, ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳುಅವರ ಮೇಲೆ ಗುಂಡು ಹಾರಿಸಿದ್ದಾರೆ.

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ, ಸ್ಥಿತಿ ಗಂಭೀರ
ಗುಂಡಿನ ದಾಳಿImage Credit source: Google
ನಯನಾ ರಾಜೀವ್
|

Updated on: Sep 27, 2025 | 7:50 AM

Share

ನವದೆಹಲಿ, ಸೆಪ್ಟೆಂಬರ್ 27: ಬೆಳಗ್ಗೆ ಜಾಗಿಂಗ್​​ಗೆ ಹೋದ ವ್ಯಕ್ತಿ ಮೇಲೆ ಹಲವು ಬಾರಿ ಗುಂಡಿನ ದಾಳಿ(Firing) ನಡೆಸಿರುವ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದು 55 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಖ್‌ಪತ್ ಸಿಂಗ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಜಾಗಿಂಗ್ ಮಾಡುತ್ತಿದ್ದಾಗ, ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳುಅವರ ಮೇಲೆ ಗುಂಡು ಹಾರಿಸಿದ್ದಾರೆ.

ಪೊಲೀಸರ ಪ್ರಕಾರ, ದಾಳಿಕೋರರು ಸ್ಥಳದಿಂದ ಪರಾರಿಯಾಗುವ ಮೊದಲು ಕನಿಷ್ಠ ಮೂರು ಸುತ್ತು ಗುಂಡು ಹಾರಿಸಿದ್ದರು. ಮಾಳವೀಯ ನಗರ ಬಳಿಯ ಬೇಗಂಪುರ ನಿವಾಸಿ ಕಟಾರಿಯಾ ಅವರಿಗೆ ಗುಂಡೇಟಿನ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಪ್ರಜ್ಞೆ ಇತ್ತು. ಅವರು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಘಟನೆಯ ಬಗ್ಗೆ ಪಿಸಿಆರ್ ಕರೆ ಬಂದಿದ್ದು, ತಕ್ಷಣ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಕ್ರಮಗಳು ನಡೆಯುತ್ತಿವೆ. ಅಪರಾಧದ ಸ್ಥಳವನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ.

ಮತ್ತಷ್ಟು ಓದಿ: Video: ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಗುಂಡಿನ ದಾಳಿ, ಮೂವರಿಗೆ ಗಂಭೀರ ಗಾಯ

ಶಂಕಿತರನ್ನು ಪತ್ತೆಹಚ್ಚಲು ಹತ್ತಿರದ ಅಂಗಡಿಗಳು ಮತ್ತು ಬೀದಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಪ್ರದೇಶದಲ್ಲಿ ಹೆಚ್ಚುವರಿ ಕಣ್ಗಾವಲು ನಿಯೋಜಿಸಲಾಗಿದೆ.

ಕಟಾರಿಯಾ ಈ ಪ್ರದೇಶದಲ್ಲಿ ಪರಿಚಿತರಾಗಿದ್ದು, ಈ ಹಿಂದೆ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಕಾಣಿಸಿಕೊಂಡಿದ್ದರು.ದಾಳಿಕೋರರನ್ನು ಗುರುತಿಸಿ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ