AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ, ಸ್ಥಿತಿ ಗಂಭೀರ

ಬೆಳಗ್ಗೆ ಜಾಗಿಂಗ್​​ಗೆ ಹೋದ ವ್ಯಕ್ತಿ ಮೇಲೆ ಹಲವು ಬಾರಿ ಗುಂಡಿನ ದಾಳಿ(Firing) ನಡೆಸಿರುವ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದು 55 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಖ್‌ಪತ್ ಸಿಂಗ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಜಾಗಿಂಗ್ ಮಾಡುತ್ತಿದ್ದಾಗ, ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳುಅವರ ಮೇಲೆ ಗುಂಡು ಹಾರಿಸಿದ್ದಾರೆ.

ದೆಹಲಿ: ಜಾಗಿಂಗ್​​ಗೆ ಹೋಗಿದ್ದ ವ್ಯಕ್ತಿ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ, ಸ್ಥಿತಿ ಗಂಭೀರ
ಗುಂಡಿನ ದಾಳಿImage Credit source: Google
ನಯನಾ ರಾಜೀವ್
|

Updated on: Sep 27, 2025 | 7:50 AM

Share

ನವದೆಹಲಿ, ಸೆಪ್ಟೆಂಬರ್ 27: ಬೆಳಗ್ಗೆ ಜಾಗಿಂಗ್​​ಗೆ ಹೋದ ವ್ಯಕ್ತಿ ಮೇಲೆ ಹಲವು ಬಾರಿ ಗುಂಡಿನ ದಾಳಿ(Firing) ನಡೆಸಿರುವ ಘಟನೆ ದೆಹಲಿಯ ಮಾಳವೀಯ ನಗರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದು 55 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಖ್‌ಪತ್ ಸಿಂಗ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಜಾಗಿಂಗ್ ಮಾಡುತ್ತಿದ್ದಾಗ, ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳುಅವರ ಮೇಲೆ ಗುಂಡು ಹಾರಿಸಿದ್ದಾರೆ.

ಪೊಲೀಸರ ಪ್ರಕಾರ, ದಾಳಿಕೋರರು ಸ್ಥಳದಿಂದ ಪರಾರಿಯಾಗುವ ಮೊದಲು ಕನಿಷ್ಠ ಮೂರು ಸುತ್ತು ಗುಂಡು ಹಾರಿಸಿದ್ದರು. ಮಾಳವೀಯ ನಗರ ಬಳಿಯ ಬೇಗಂಪುರ ನಿವಾಸಿ ಕಟಾರಿಯಾ ಅವರಿಗೆ ಗುಂಡೇಟಿನ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಸಮಯದಲ್ಲಿ ಪ್ರಜ್ಞೆ ಇತ್ತು. ಅವರು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಘಟನೆಯ ಬಗ್ಗೆ ಪಿಸಿಆರ್ ಕರೆ ಬಂದಿದ್ದು, ತಕ್ಷಣ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಕ್ರಮಗಳು ನಡೆಯುತ್ತಿವೆ. ಅಪರಾಧದ ಸ್ಥಳವನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ.

ಮತ್ತಷ್ಟು ಓದಿ: Video: ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಗುಂಡಿನ ದಾಳಿ, ಮೂವರಿಗೆ ಗಂಭೀರ ಗಾಯ

ಶಂಕಿತರನ್ನು ಪತ್ತೆಹಚ್ಚಲು ಹತ್ತಿರದ ಅಂಗಡಿಗಳು ಮತ್ತು ಬೀದಿಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಪ್ರದೇಶದಲ್ಲಿ ಹೆಚ್ಚುವರಿ ಕಣ್ಗಾವಲು ನಿಯೋಜಿಸಲಾಗಿದೆ.

ಕಟಾರಿಯಾ ಈ ಪ್ರದೇಶದಲ್ಲಿ ಪರಿಚಿತರಾಗಿದ್ದು, ಈ ಹಿಂದೆ ಹಿರಿಯ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಕಾಣಿಸಿಕೊಂಡಿದ್ದರು.ದಾಳಿಕೋರರನ್ನು ಗುರುತಿಸಿ ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ