ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ […]

ನಾಡಬಾಂಬ್ ಸಾಗಿಸುವಾಗ ಬೈಕ್ ಸ್ಕಿಡ್ ಆಗಿ ಯುವಕ ಬಲಿ
ಸಾಧು ಶ್ರೀನಾಥ್​

Updated on: Dec 30, 2019 | 5:28 PM

ಹೈದರಾಬಾದ್: ಬೈಕ್​ನಲ್ಲಿ ನಾಡಬಾಂಬ್ ಸಾಗಿಸುತ್ತಿದ್ದ ವೇಳೆ ಬೈಕ್ ಸ್ಕಿಡ್​ ಆಗಿ ಬಿದ್ದು ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಅದಿಲಾಬಾದ್​ನ ಉಟ್ನೂರ್​ನಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ಮೂಲದ ಮುನಿರಾಜ್ ಸೇರಿದಂತೆ ಇಬ್ಬರು ಯುವಕರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಕಾಡಿನ ಹಂದಿ ಸಾಯಿಸಲು ನಾಡಬಾಂಬನ್ನು ಸಾಗಿಸುತ್ತಿದ್ದರು. ಈ ವೇಳೆ ದಾರಿಯಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ನೆಲಕ್ಕೆ ಬಿದ್ದಿದೆ. ಹಿಂದೆ ಕೂತ ಯುವಕ ಬೈಕ್​ನಿಂದ ಎಗರಿದ್ದಾನೆ ಹಾಗೂ ಬೈಕ್ ಸವಾರ ಮುನಿರಾಜು ಮತ್ತು ಬೈಕ್ ನೆಲಕ್ಕೆ ಅಪ್ಪಳಿಸಿದಂತೆ ನಾಡಬಾಂಬ್ ಸ್ಪೋಟಗೊಂಡಿದೆ.

ಘಟನೆಯಲ್ಲಿ ಮುನಿರಾಜು ದೇಹ ಛಿದ್ರಛಿದ್ರವಾಗಿದೆ. ಸ್ಪೋಟದ ಶಬ್ದಕ್ಕೆ ಜನ ಭಯಭೀತರಾಗಿದ್ದಾರೆ. ಹಿಂಬದಿ ಕೂತವನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 5:27 pm, Mon, 30 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us