AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ಸಂಜು ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಈ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 22, 2021 | 6:50 PM

Share

ಹೋಶಂಗಾಬಾದ್​: ಇತ್ತೀಚೆಗೆ ಅಪಾಯದ ಸ್ಥಳಗಳಲ್ಲಿ, ಅಂದರೆ ನದಿಗಳ ಅಂಚು, ಪ್ರಪಾತದ ಅಂಚು, ರೈಲ್ವೆ ಹಳಿಗಳ ಮೇಲೆ ನಿಂತು ಸೆಲ್ಫೀ ತೆಗೆಯುವುದು, ಕ್ರೇಜಿ ವಿಡಿಯೋಗಳನ್ನು ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಹೊಶಂಗಾಬಾದ್​ ಜಿಲ್ಲೆಯಲ್ಲಿ ನಡೆದಿದೆ. 22ವರ್ಷದ ಯುವಕನೊಬ್ಬ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಮಾಡಲು ಹೋಗಿ ರೈಲಿಗೆ ಬಲಿಯಾಗಿದ್ದಾನೆ.  

ಇಟಾರಸಿ-ನಾಗಪುರ ರೈಲ್ವೆ ಮಾರ್ಗದ ಹಳಿಯ ಮೇಲೆ ಭಾನುವಾರ ಘಟನೆ ನಡೆದದ್ದು, ಇಂದು ಬೆಳಕಿಗೆ ಬಂದಿದೆ. ಮೃತನನ್ನು ಸಂಜು ಚೌರೆ ಎಂದು ಗುರುತಿಸಲಾಗಿದೆ. ಈತ ಪತ್ರೋಟಾ ಠಾಣೆ ವ್ಯಾಪ್ತಿಯ ಪಂಜರ ಕಲಾ ಗ್ರಾಮದ ನಿವಾಸಿ ಎಂದು ಪೊಲೀಸ್ ಅಧಿಕಾರಿ ನಾಗೇಶ್​ ವರ್ಮಾ ಪಿಟಿಐಗೆ ಮಾಹಿತಿ ನೀಡಿದ್ದಾರೆ.  ಭಾನುವಾರ ಸಂಜೆ 5.30ರ ಹೊತ್ತಿಗೆ ಈ ಯುವಕ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ಆತನ ಗೆಳೆಯನೂ ಒಬ್ಬ ಜೊತೆಗಿದ್ದ, ಆದರೆ ಅವನು ಅಪಾಯದಿಂದ ಪಾರಾಗಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡುವ ಉದ್ದೇಶ ಅವನದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಅದೂ ಕೂಡ ವಿಡಿಯೋದಲ್ಲಿ ಚಿತ್ರೀಕರಣಗೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ