AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ

ಸಂಜು ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಈ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.

ರೈಲ್ವೆ ಹಳಿ ಮೇಲೆ ನಿಂತು ವಿಡಿಯೋಕ್ಕೆ ಪೋಸ್​ ಕೊಡುತ್ತಿದ್ದ ಯುವಕನ ದುರಂತ ಸಾವು; ಸರಕು ರೈಲು ಡಿಕ್ಕಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 22, 2021 | 6:50 PM

Share

ಹೋಶಂಗಾಬಾದ್​: ಇತ್ತೀಚೆಗೆ ಅಪಾಯದ ಸ್ಥಳಗಳಲ್ಲಿ, ಅಂದರೆ ನದಿಗಳ ಅಂಚು, ಪ್ರಪಾತದ ಅಂಚು, ರೈಲ್ವೆ ಹಳಿಗಳ ಮೇಲೆ ನಿಂತು ಸೆಲ್ಫೀ ತೆಗೆಯುವುದು, ಕ್ರೇಜಿ ವಿಡಿಯೋಗಳನ್ನು ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಈಗ ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಹೊಶಂಗಾಬಾದ್​ ಜಿಲ್ಲೆಯಲ್ಲಿ ನಡೆದಿದೆ. 22ವರ್ಷದ ಯುವಕನೊಬ್ಬ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಮಾಡಲು ಹೋಗಿ ರೈಲಿಗೆ ಬಲಿಯಾಗಿದ್ದಾನೆ.  

ಇಟಾರಸಿ-ನಾಗಪುರ ರೈಲ್ವೆ ಮಾರ್ಗದ ಹಳಿಯ ಮೇಲೆ ಭಾನುವಾರ ಘಟನೆ ನಡೆದದ್ದು, ಇಂದು ಬೆಳಕಿಗೆ ಬಂದಿದೆ. ಮೃತನನ್ನು ಸಂಜು ಚೌರೆ ಎಂದು ಗುರುತಿಸಲಾಗಿದೆ. ಈತ ಪತ್ರೋಟಾ ಠಾಣೆ ವ್ಯಾಪ್ತಿಯ ಪಂಜರ ಕಲಾ ಗ್ರಾಮದ ನಿವಾಸಿ ಎಂದು ಪೊಲೀಸ್ ಅಧಿಕಾರಿ ನಾಗೇಶ್​ ವರ್ಮಾ ಪಿಟಿಐಗೆ ಮಾಹಿತಿ ನೀಡಿದ್ದಾರೆ.  ಭಾನುವಾರ ಸಂಜೆ 5.30ರ ಹೊತ್ತಿಗೆ ಈ ಯುವಕ ರೈಲ್ವೆ ಹಳಿಯ ಮೇಲೆ ನಿಂತು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ಆತನ ಗೆಳೆಯನೂ ಒಬ್ಬ ಜೊತೆಗಿದ್ದ, ಆದರೆ ಅವನು ಅಪಾಯದಿಂದ ಪಾರಾಗಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡುವ ಉದ್ದೇಶ ಅವನದಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಚೌರೆ ಹಳಿಯ ಮೇಲೆ ನಿಂತಿದ್ದ..ಆತನ ಗೆಳೆಯ ವಿಡಿಯೋ ಮಾಡಿದ್ದಾನೆ. ಅದೇ ಸಮಯದಲ್ಲಿ ಸರಕು ರೈಲೊಂದು ಡಿಕ್ಕಿಹೊಡೆದಿದೆ. ಅದೂ ಕೂಡ ವಿಡಿಯೋದಲ್ಲಿ ಚಿತ್ರೀಕರಣಗೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಬೆಂಗಳೂರಿಂದ ಹೈದರಾಬಾದ್​ಗೆ ಪ್ರಯಾಣ ಇನ್ನಷ್ಟು ಸುಗಮ; 1 ಕಾರಿಡಾರ್​, 3 ಅಂಡರ್​ಪಾಸ್​ ನಿರ್ಮಾಣ ಮುಕ್ತಾಯ ಹಂತದಲ್ಲಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು