AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಬಾಂಬ್ ಕಚ್ಚಿದ ವ್ಯಕ್ತಿ, ಬಾಯಿಯಲ್ಲೇ ಸ್ಫೋಟಗೊಂಡು ಸ್ಥಳದಲ್ಲೇ ಸಾವು

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಸ್ಫೋಟಗೊಂಡು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ, 35 ವರ್ಷದ ವ್ಯಕ್ತಿಯೊಬ್ಬರು ಕಂಟ್ರಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಅದು ಸ್ಥಳದಲ್ಲೇ ಸ್ಫೋಟಗೊಂಡಿದೆ.

ಕುಡಿದ ಮತ್ತಿನಲ್ಲಿ ಬಾಂಬ್ ಕಚ್ಚಿದ ವ್ಯಕ್ತಿ, ಬಾಯಿಯಲ್ಲೇ ಸ್ಫೋಟಗೊಂಡು ಸ್ಥಳದಲ್ಲೇ ಸಾವು
ಕಂಟ್ರಿ ಬಾಂಬ್-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Oct 25, 2023 | 12:01 PM

Share

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಬಾಯಿಯಲ್ಲೇ ಸ್ಫೋಟಗೊಂಡು ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಬಂಗಾರುಪಾಲೆಂ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ, 35 ವರ್ಷದ ವ್ಯಕ್ತಿಯೊಬ್ಬರು ಕಂಟ್ರಿ ಬಾಂಬ್​ ಅನ್ನು ಕಚ್ಚಿದ ಪರಿಣಾಮ ಅದು ಸ್ಥಳದಲ್ಲೇ ಸ್ಫೋಟಗೊಂಡಿದೆ.

ಬಂಗಾರುಪಾಲೆಂ ಸಿಐ ನಾಗರಾಜು ರಾವ್ ಅವರು ನೀಡಿರುವ ಮಾಹಿತಿ ಪ್ರಕಾರ, ಕೊಲೆಯಾದವರನ್ನು ಗದ್ದಂವಾರಿಪಲ್ಲಿ ನಿವಾಸಿ ಎಂ ಚಿರಂಜೀವಿ ಎಂದು ಗುರುತಿಸಲಾಗಿದೆ. ಚಿರಂಜೀವಿ ಪತ್ನಿ ಜತೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದರು, ಜತೆಗೆ ಜೀವನದಲ್ಲಿ ನಡೆದ ಕೆಲವು ಘಟನೆಗಳಿಂದ ಖಿನ್ನತೆಗೆ ಒಳಗಾಗಿದ್ದರು, ಕುಡಿತಕ್ಕೆ ದಾಸರಾಗಿದ್ದರು.

ಮತ್ತಷ್ಟು ಓದಿ: ಪಾಕಿಸ್ತಾನದಲ್ಲಿ ನೆಲ ಬಾಂಬ್ ಸ್ಫೋಟ, 7 ಮಂದಿ ಸಾವು

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಆತ ಕುಡಿತದ ಅಮಲಿನಲ್ಲಿದ್ದ ಎಂಬುದು ತಿಳಿದುಬಂದಿದೆ. ಆಗ ಕಂಟ್ರಿ ಬಾಂಬ್​ನ್ನು ಕಚ್ಚಿದ್ದಾನೆ, ಅದು ಬಾಯಿಯಲ್ಲಿಯೇ ಸ್ಫೋಟಗೊಂಡಿದೆ. ಘಟನೆಯಲ್ಲಿ ಮುಖವು ಸಂಪೂರ್ಣವಾಗಿ ಛಿದ್ರವಾಗಿತ್ತು. ಸ್ಥಳೀಯರು ಬಂದು ತಕ್ಷಣವೇ ಬಂಗಾರುಪಾಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಚಿರಂಜೀವಿ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬಂಗಾರುಪಾಲೆಂ ಪೊಲೀಸರು ತಕ್ಷಣವೇ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಿರಂಜೀವಿ ಕೈಗೆ ಕಂಟ್ರಿ ಬಾಂಬ್ ಹೇಗೆ ಬಂದಿತ್ತು ಎನ್ನುವುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!