AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಾಷೆಗೆಂದು ಸ್ನೇಹಿತನ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟ ವ್ಯಕ್ತಿ, ಸಾವು

ತಮಾಷೆಯಿಂದ ಒಂದು ಪ್ರಾಣವೇ ಹೋಗಿದೆ, ಸ್ನೇಹಿತನ ಬಳಿ ತಮಾಷೆ ಮಾಡುತ್ತಾ ವ್ಯಕ್ತಿಯೊಬ್ಬ ಅವರ ಖಾಸಗಿ ಅಂಗಕ್ಕೆ ಕಂಪ್ರೆಸರ್ ಪೈಪ್ ಅಳವಡಿಸಿದ ಕಾರಣ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಸಂಜೆ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾಗ ಪ್ರಕಾಶ್ ಅವರ ಸ್ನೇಹಿತ ಅಲ್ಪೇಶ್ ತಮಾಷೆಗಾಗಿ ಪ್ರಕಾಶ್​ ಅವರ ಖಾಸಗಿ ಅಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟಿದ್ದಾರೆ.

ತಮಾಷೆಗೆಂದು ಸ್ನೇಹಿತನ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟ ವ್ಯಕ್ತಿ, ಸಾವು
ಸಾವುImage Credit source: iStock
ನಯನಾ ರಾಜೀವ್
|

Updated on: Jan 28, 2025 | 7:44 AM

Share

ತಮಾಷೆಗೆಂದು ಮಾಡುವ ಕೆಲವು ಕೆಲಸಗಳು ನಮ್ಮವರ ಜೀವಕ್ಕೆ ಅಪಾಯ ತಂದುಬಿಡುತ್ತವೆ, ತಮಾಷೆಗೆಂದು ಸ್ನೇಹಿತನೊಬ್ಬನ ಗುಪ್ತಾಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಮೃತ ಪ್ರಕಾಶ್ ಎಂಬುವವರು ಲೋಹದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಆತನ ಸಹೋದರ ಘೇವಾಬಾಯಿ ಮತ್ತು ಆತನ ಸ್ನೇಹಿತರನ್ನು ಭೇಟಿಯಾಗಿದ್ದರು. ಸಂಜೆ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾಗ ಪ್ರಕಾಶ್ ಅವರ ಸ್ನೇಹಿತ ಅಲ್ಪೇಶ್ ತಮಾಷೆಗಾಗಿ ಪ್ರಕಾಶ್​ ಅವರ ಖಾಸಗಿ ಅಂಗಕ್ಕೆ ಕಂಪ್ರೆಸರ್ ಪೈಪ್ ಇಟ್ಟಿದ್ದಾರೆ, ಇದರಿಂದಾಗಿ ಪ್ರಕಾಶ್ ಅವರ ದೇಹದಲ್ಲಿ ಗಾಳಿ ತುಂಬಿತ್ತು.

ತಕ್ಷಣವೇ ವಾಂತಿ ಮಾಡಿಕೊಂಡು ಪ್ರಕಾಶ್ ತಲೆತಿರುಗಿ ಬಿದ್ದಿದ್ದರು. ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ನಂತರ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಮತ್ತಷ್ಟು ಓದಿ: ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಮತಾಂತರಕ್ಕೆ ಯತ್ನ, ಇಮ್ರಾನ್ ಬಂಧನ

ಭಾನುವಾರ ಗಣರಾಜ್ಯೋತ್ಸವದಂದು ತನ್ನ ಕಂಪನಿಯನ್ನು ಮುಚ್ಚಿದ್ದರಿಂದ ಪ್ರಕಾಶ್ ತನ್ನ ಸಹೋದರ ಮತ್ತು ಸ್ನೇಹಿತನ್ನು ಭೇಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕಾಶ್ ಅವರ ಸಹೋದರ ಘೇವಾಭಾಯ್ ಅವರ ಪ್ರಕಾರ, ಅಲ್ಪೇಶ್ ಅವರು ಕಂಪ್ರೆಸರ್ ಪೈಪ್‌ನಲ್ಲಿನ ಹೆಚ್ಚಿನ ಗಾಳಿಯ ಒತ್ತಡದ ಬಗ್ಗೆ ತಿಳಿದಿದ್ದರು ಆದರೂ ಅದನ್ನು ಲೆಕ್ಕಿಸದೆ ಅವರು ವ್ಯಕ್ತಿಯ ಖಾಸಗಿ ಭಾಗಕ್ಕೆ ಹಾಕಿದ್ದರು, ಇದು ಅವರ ಸಾವಿಗೆ ಕಾರಣವಾಯಿತು ಎಂದರು.

ಘೇವಾಭಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದರು. ಪ್ರಕಾಶ್ ಅವರಿಗೆ ತೊಂದರೆ ಕೊಡುವ ಯಾವ ಉದ್ದೇಶವೂ ಇರಲಿಲ್ಲ, ತಮಾಷೆಗಾಗಿ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!