AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 17, 2021 | 9:35 PM

Share

ಭೋಪಾಲ್​: ತನಗೆ ಕೊವಿಡ್ 19 ಸೋಂಕು ತಗುಲಿದೆ ಎಂದು ಭಾವಿಸಿ, ಪರಿಚಿತನೊಬ್ಬ ಹೇಳಿದನೆಂದು ಸೀಮೆಎಣ್ಣೆ ಕುಡಿದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ನಡೆದಿದ್ದು ಮಧ್ಯಪ್ರದೇಶದ ಭೋಪಾಲ್​ನಲ್ಲಿ. ಆದರೆ ನಂತರ ಇವರ ಕೊವಿಡ್​ 19 ವರದಿ ನೆಗೆಟಿವ್​ ಎಂದು ಬಂದಿದೆ. ಹೀಗೊಂದು ಮಾಡಬಾರದ ಪ್ರಯೋಗ ಮಾಡಿದ ವ್ಯಕ್ತಿಯ ಹೆಸರು ಮಹೇಂದ್ರ.

ಮಹೇಂದ್ರ ಟೇಲರ್​ ವೃತ್ತಿ ನಡೆಸುತ್ತಿದ್ದರು. ಭೋಪಾಲ್​ನ ಶಿವ ನಗರ ಎಂಬಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಕಳೆದ 5-6 ದಿನಗಳಿಂದಲೂ ಜ್ವರ ಇತ್ತು. ಏನೇ ಔಷಧಿ ತೆಗೆದುಕೊಂಡರೂ ಜ್ವರ ಬರುತ್ತಲೇ ಇತ್ತು. ಹೀಗಾಗಿ ತಮಗೆ ಕೊವಿಡ್​ 19 ಬಂದಿದೆ ಎಂದು ಭಾವಿಸಿದ ಮಹೇಂದ್ರ ತೀರ ಹೆದರಿದ್ದರು. ಇದೇ ವೇಳೆ ಇವರ ಪರಿಚಯದವರೊಬ್ಬರು, ಕೆರೋಸಿನ್​ ಕುಡಿದರೆ ಕೊವಿಡ್ ಸೋಂಕು ಕಡಿಮೆ ಆಗುತ್ತದೆ ಎಂಬ ಸಲಹೆ ಕೊಟ್ಟಿದ್ದರು. ಮಹೇಂದ್ರ ಅದರಂತೆ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ. ಹಾಗಾಗಿ ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಅಶೋಕ ಗಾರ್ಡನ್​​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಕ್ಕಿತಾದರೂ, ಅಲ್ಲಿ ಕರೆದುಕೊಂಡು ಹೋಗುವಷ್ಟರಲ್ಲೇ ಮೃತಪಟ್ಟಿದ್ದರು. ಮಹೇಂದ್ರ ಅವರ ಮೃತದೇಹದ ಪರೀಕ್ಷೆ ಮಾಡಿದಾಗ ಕೊವಿಡ್​ 19 ವರದಿ ನೆಗೆಟಿವ್​ ಬಂದಿದೆ ಎಂದೂ ಪೊಲೀಸ್​ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೆ: ಯೆಶ್ ಟೆಲ್ ಸಮೂಹ ಸಂಸ್ಥೆಯಿಂದ ಉಚಿತ ಆಕ್ಸಿಜನ್ ಪೂರೈಕೆ

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

Published On - 9:32 pm, Mon, 17 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ