AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 17, 2021 | 9:35 PM

Share

ಭೋಪಾಲ್​: ತನಗೆ ಕೊವಿಡ್ 19 ಸೋಂಕು ತಗುಲಿದೆ ಎಂದು ಭಾವಿಸಿ, ಪರಿಚಿತನೊಬ್ಬ ಹೇಳಿದನೆಂದು ಸೀಮೆಎಣ್ಣೆ ಕುಡಿದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ನಡೆದಿದ್ದು ಮಧ್ಯಪ್ರದೇಶದ ಭೋಪಾಲ್​ನಲ್ಲಿ. ಆದರೆ ನಂತರ ಇವರ ಕೊವಿಡ್​ 19 ವರದಿ ನೆಗೆಟಿವ್​ ಎಂದು ಬಂದಿದೆ. ಹೀಗೊಂದು ಮಾಡಬಾರದ ಪ್ರಯೋಗ ಮಾಡಿದ ವ್ಯಕ್ತಿಯ ಹೆಸರು ಮಹೇಂದ್ರ.

ಮಹೇಂದ್ರ ಟೇಲರ್​ ವೃತ್ತಿ ನಡೆಸುತ್ತಿದ್ದರು. ಭೋಪಾಲ್​ನ ಶಿವ ನಗರ ಎಂಬಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಕಳೆದ 5-6 ದಿನಗಳಿಂದಲೂ ಜ್ವರ ಇತ್ತು. ಏನೇ ಔಷಧಿ ತೆಗೆದುಕೊಂಡರೂ ಜ್ವರ ಬರುತ್ತಲೇ ಇತ್ತು. ಹೀಗಾಗಿ ತಮಗೆ ಕೊವಿಡ್​ 19 ಬಂದಿದೆ ಎಂದು ಭಾವಿಸಿದ ಮಹೇಂದ್ರ ತೀರ ಹೆದರಿದ್ದರು. ಇದೇ ವೇಳೆ ಇವರ ಪರಿಚಯದವರೊಬ್ಬರು, ಕೆರೋಸಿನ್​ ಕುಡಿದರೆ ಕೊವಿಡ್ ಸೋಂಕು ಕಡಿಮೆ ಆಗುತ್ತದೆ ಎಂಬ ಸಲಹೆ ಕೊಟ್ಟಿದ್ದರು. ಮಹೇಂದ್ರ ಅದರಂತೆ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ. ಹಾಗಾಗಿ ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಅಶೋಕ ಗಾರ್ಡನ್​​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಕ್ಕಿತಾದರೂ, ಅಲ್ಲಿ ಕರೆದುಕೊಂಡು ಹೋಗುವಷ್ಟರಲ್ಲೇ ಮೃತಪಟ್ಟಿದ್ದರು. ಮಹೇಂದ್ರ ಅವರ ಮೃತದೇಹದ ಪರೀಕ್ಷೆ ಮಾಡಿದಾಗ ಕೊವಿಡ್​ 19 ವರದಿ ನೆಗೆಟಿವ್​ ಬಂದಿದೆ ಎಂದೂ ಪೊಲೀಸ್​ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೆ: ಯೆಶ್ ಟೆಲ್ ಸಮೂಹ ಸಂಸ್ಥೆಯಿಂದ ಉಚಿತ ಆಕ್ಸಿಜನ್ ಪೂರೈಕೆ

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

Published On - 9:32 pm, Mon, 17 May 21

Follow Us
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು