AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ.

ಕೊರೊನಾ ಸೋಂಕಿನಿಂದ ಪಾರಾಗಲು ಸೀಮೆಎಣ್ಣೆ ಕುಡಿದು ಮೃತಪಟ್ಟ ವ್ಯಕ್ತಿ; ಸತ್ತ ಮೇಲೆ ವರದಿಯೂ ನೆಗೆಟಿವ್ ಬಂತು..
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 17, 2021 | 9:35 PM

Share

ಭೋಪಾಲ್​: ತನಗೆ ಕೊವಿಡ್ 19 ಸೋಂಕು ತಗುಲಿದೆ ಎಂದು ಭಾವಿಸಿ, ಪರಿಚಿತನೊಬ್ಬ ಹೇಳಿದನೆಂದು ಸೀಮೆಎಣ್ಣೆ ಕುಡಿದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ನಡೆದಿದ್ದು ಮಧ್ಯಪ್ರದೇಶದ ಭೋಪಾಲ್​ನಲ್ಲಿ. ಆದರೆ ನಂತರ ಇವರ ಕೊವಿಡ್​ 19 ವರದಿ ನೆಗೆಟಿವ್​ ಎಂದು ಬಂದಿದೆ. ಹೀಗೊಂದು ಮಾಡಬಾರದ ಪ್ರಯೋಗ ಮಾಡಿದ ವ್ಯಕ್ತಿಯ ಹೆಸರು ಮಹೇಂದ್ರ.

ಮಹೇಂದ್ರ ಟೇಲರ್​ ವೃತ್ತಿ ನಡೆಸುತ್ತಿದ್ದರು. ಭೋಪಾಲ್​ನ ಶಿವ ನಗರ ಎಂಬಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಕಳೆದ 5-6 ದಿನಗಳಿಂದಲೂ ಜ್ವರ ಇತ್ತು. ಏನೇ ಔಷಧಿ ತೆಗೆದುಕೊಂಡರೂ ಜ್ವರ ಬರುತ್ತಲೇ ಇತ್ತು. ಹೀಗಾಗಿ ತಮಗೆ ಕೊವಿಡ್​ 19 ಬಂದಿದೆ ಎಂದು ಭಾವಿಸಿದ ಮಹೇಂದ್ರ ತೀರ ಹೆದರಿದ್ದರು. ಇದೇ ವೇಳೆ ಇವರ ಪರಿಚಯದವರೊಬ್ಬರು, ಕೆರೋಸಿನ್​ ಕುಡಿದರೆ ಕೊವಿಡ್ ಸೋಂಕು ಕಡಿಮೆ ಆಗುತ್ತದೆ ಎಂಬ ಸಲಹೆ ಕೊಟ್ಟಿದ್ದರು. ಮಹೇಂದ್ರ ಅದರಂತೆ ಮಾಡಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

ಸೀಮೆಎಣ್ಣೆ ಕುಡಿದ ಬಳಿಕ ಮಹೇಂದ್ರ ಆರೋಗ್ಯಸ್ಥಿತಿ ತೀರ ಹದಗೆಟ್ಟಿತ್ತು. ಹೀಗಾಗಿ ಅವರ ಕುಟುಂಬದವರು ಹತ್ತಿರ ಆಸ್ಪತ್ರೆಗೆ ಸೇರಿಸಲು ಎಲ್ಲ ರೀತಿಯ ಪ್ರಯತ್ನ ಪಟ್ಟಿದ್ದರು. ಆದರೆ ಕೊವಿಡ್​ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಎಲ್ಲಿಯೂ ಬೆಡ್​ ಸಿಕ್ಕಿರಲಿಲ್ಲ. ಹಾಗಾಗಿ ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಅಶೋಕ ಗಾರ್ಡನ್​​ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ ಸಿಕ್ಕಿತಾದರೂ, ಅಲ್ಲಿ ಕರೆದುಕೊಂಡು ಹೋಗುವಷ್ಟರಲ್ಲೇ ಮೃತಪಟ್ಟಿದ್ದರು. ಮಹೇಂದ್ರ ಅವರ ಮೃತದೇಹದ ಪರೀಕ್ಷೆ ಮಾಡಿದಾಗ ಕೊವಿಡ್​ 19 ವರದಿ ನೆಗೆಟಿವ್​ ಬಂದಿದೆ ಎಂದೂ ಪೊಲೀಸ್​ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೆ: ಯೆಶ್ ಟೆಲ್ ಸಮೂಹ ಸಂಸ್ಥೆಯಿಂದ ಉಚಿತ ಆಕ್ಸಿಜನ್ ಪೂರೈಕೆ

Cyclone Tauktae: ತೌಕ್ತೆ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ 6 ಮಂದಿ ಸಾವು; ಅಹ್ಮದಾಬಾದ್​ನಲ್ಲಿ ವಿಪರೀತ ಮಳೆ, ಪರಿಸ್ಥಿತಿ ಬಗ್ಗೆ ವರದಿ ಪಡೆದ ಪ್ರಧಾನಿ ಮೋದಿ

Published On - 9:32 pm, Mon, 17 May 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ