AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು

ಮರಣೋತ್ತರ ಪರೀಕ್ಷೆ ನಂತರವಷ್ಟೇ ನಾವು ಸಾವಿಗೆ ನಿಜವಾದ ಕಾರಣ ತಿಳಿದುಕೊಳ್ಳಬಹುದು. ಕೊರೊನಾ ಲಸಿಕೆಯಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 22, 2021 | 8:16 PM

Share

ನವದೆಹಲಿ: ಕೊರೊನಾ ಲಸಿಕೆ ಪಡೆದ ಮತ್ತೋರ್ವ ಆರೋಗ್ಯ ಕಾರ್ಯಕರ್ತ ದೆಹಲಿಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ ಕಳೆದ ಶನಿವಾರ ಕೊರೊನಾ ಲಸಿಕೆ ನೀಡಲಾಗಿತ್ತು. ಸಾವಿಗೆ ಕೊರೊನಾ ಲಸಿಕೆ ಕಾರಣವೇ ಎನ್ನುವ ವಿಚಾರ ಇನ್ನೂ ಅಧಿಕೃತವಾಗಿಲ್ಲ.

ರಾಜ್ವಾಂತಿ ಮೃತ ವ್ಯಕ್ತಿ. ಇವರು ಕಳೆದ ಶನಿವಾರ ಕೊರೊನಾ ಲಸಿಕೆ ಪಡೆದಿದ್ದರು. ಕೊರೊನಾ ಲಸಿಕೆ ಪಡೆದ ನಂತರ ಅವರು ಸಹಜವಾಗಿದ್ದರು. ಆದರೆ, ಇಂದು ಮುಂಜಾನೆ ಅವರು ಕೊಠಡಿಯಿಂದ ಹೊರ ಬಂದಿರಲಿಲ್ಲ. ನಂತರ ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿರುವ ವಿಚಾರ ದೃಢವಾಗಿದೆ.

ಮರಣೋತ್ತರ ಪರೀಕ್ಷೆ ನಂತರವಷ್ಟೇ ನಾವು ಸಾವಿಗೆ ನಿಜವಾದ ಕಾರಣ ತಿಳಿದುಕೊಳ್ಳಬಹುದು. ಕೊರೊನಾ ಲಸಿಕೆಯಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಗುರುಗ್ರಾಮದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ವಿರೇಂದ್ರ ಯಾದವ್​ ಹೇಳಿದ್ದಾರೆ.

ಕಳೆದ ಶನಿವಾರದಿಂದ ಕೊರೊನಾ ಲಸಿಕೆ ನೀಡವ ಕಾರ್ಯಕ್ರಮ ಆರಂಭವಾಗಿದೆ. ಕೋವಿಶೀಲ್ಡ್​ ಲಸಿಕೆಯನ್ನು ದೇಶದಲ್ಲಿ ನೀಡಲಾಗುತ್ತಿದೆ. ಈಗಾಗಲೆ ಕೊರೊನಾ ಲಸಿಕೆ ಪಡೆದ ಮೂವರು ಮೃತಪಟ್ಟಿದ್ದಾರೆ. ಆದರೆ, ಇವರ ಸಾವಿಗೆ ಕೊರೊನಾ ಲಸಿಕೆ ಕಾರಣವೇ ಎನ್ನುವುದು ತಿಳಿದುಬಂದಿಲ್ಲ.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!

Published On - 8:16 pm, Fri, 22 January 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ