ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು

ಮರಣೋತ್ತರ ಪರೀಕ್ಷೆ ನಂತರವಷ್ಟೇ ನಾವು ಸಾವಿಗೆ ನಿಜವಾದ ಕಾರಣ ತಿಳಿದುಕೊಳ್ಳಬಹುದು. ಕೊರೊನಾ ಲಸಿಕೆಯಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆದ ವ್ಯಕ್ತಿ ಮೃತ: ಸಾವಿಗೆ ಕಾರಣ ಗೊತ್ತಾಗಿಲ್ಲ ಎಂದ ವೈದ್ಯರು
ಸಾಂದರ್ಭಿಕ ಚಿತ್ರ

Updated on: Jan 22, 2021 | 8:16 PM

ನವದೆಹಲಿ: ಕೊರೊನಾ ಲಸಿಕೆ ಪಡೆದ ಮತ್ತೋರ್ವ ಆರೋಗ್ಯ ಕಾರ್ಯಕರ್ತ ದೆಹಲಿಯಲ್ಲಿಂದು ಮೃತಪಟ್ಟಿದ್ದಾರೆ. ಅವರಿಗೆ ಕಳೆದ ಶನಿವಾರ ಕೊರೊನಾ ಲಸಿಕೆ ನೀಡಲಾಗಿತ್ತು. ಸಾವಿಗೆ ಕೊರೊನಾ ಲಸಿಕೆ ಕಾರಣವೇ ಎನ್ನುವ ವಿಚಾರ ಇನ್ನೂ ಅಧಿಕೃತವಾಗಿಲ್ಲ.

ರಾಜ್ವಾಂತಿ ಮೃತ ವ್ಯಕ್ತಿ. ಇವರು ಕಳೆದ ಶನಿವಾರ ಕೊರೊನಾ ಲಸಿಕೆ ಪಡೆದಿದ್ದರು. ಕೊರೊನಾ ಲಸಿಕೆ ಪಡೆದ ನಂತರ ಅವರು ಸಹಜವಾಗಿದ್ದರು. ಆದರೆ, ಇಂದು ಮುಂಜಾನೆ ಅವರು ಕೊಠಡಿಯಿಂದ ಹೊರ ಬಂದಿರಲಿಲ್ಲ. ನಂತರ ಅವರನ್ನು ಆಸ್ಪತ್ರೆಗೆ ಕರೆತಂದಾಗ ಮೃತಪಟ್ಟಿರುವ ವಿಚಾರ ದೃಢವಾಗಿದೆ.

ಮರಣೋತ್ತರ ಪರೀಕ್ಷೆ ನಂತರವಷ್ಟೇ ನಾವು ಸಾವಿಗೆ ನಿಜವಾದ ಕಾರಣ ತಿಳಿದುಕೊಳ್ಳಬಹುದು. ಕೊರೊನಾ ಲಸಿಕೆಯಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಗುರುಗ್ರಾಮದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ವಿರೇಂದ್ರ ಯಾದವ್​ ಹೇಳಿದ್ದಾರೆ.

ಕಳೆದ ಶನಿವಾರದಿಂದ ಕೊರೊನಾ ಲಸಿಕೆ ನೀಡವ ಕಾರ್ಯಕ್ರಮ ಆರಂಭವಾಗಿದೆ. ಕೋವಿಶೀಲ್ಡ್​ ಲಸಿಕೆಯನ್ನು ದೇಶದಲ್ಲಿ ನೀಡಲಾಗುತ್ತಿದೆ. ಈಗಾಗಲೆ ಕೊರೊನಾ ಲಸಿಕೆ ಪಡೆದ ಮೂವರು ಮೃತಪಟ್ಟಿದ್ದಾರೆ. ಆದರೆ, ಇವರ ಸಾವಿಗೆ ಕೊರೊನಾ ಲಸಿಕೆ ಕಾರಣವೇ ಎನ್ನುವುದು ತಿಳಿದುಬಂದಿಲ್ಲ.

ಫೈಜರ್​ ಲಸಿಕೆ ಪಡೆದ 12,400 ಜನರಿಗೆ ಕೊರೊನಾ!

Published On - 8:16 pm, Fri, 22 January 21

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us