AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಜವಾಬ್ದಾರಿ ಮುಗಿಸಿ ಹೊರಟ ಜೀವ, ಮಗಳ ಮದುವೆಯಲ್ಲೇ ತಂದೆ ಹೃದಯಾಘಾತದಿಂದ ಸಾವು

ಮಗಳ ಮದುವೆಯಲ್ಲಿ ಖುಷಿಯಿಂದ ಓಡಾಡಿಕೊಂಡಿದ್ದ ತಂದೆ ಮಗಳ ಮದುವೆ ಮುಗಿಯುವಷ್ಟರಲ್ಲಿ ಕೊನೆಯುಸಿರೆಳೆದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ ಬಾಲಚಂದ್ರಂ, ಮದುವೆ ಮಂಟಪದಲ್ಲಿ ಕುಸಿದು ಬಿದ್ದರು. ಅವರನ್ನು ಕಾಮರೆಡ್ಡಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ನಡೆದಾಗ ಮದುವೆ ಮುಗಿದಿತ್ತು.

ತೆಲಂಗಾಣ: ಜವಾಬ್ದಾರಿ ಮುಗಿಸಿ ಹೊರಟ ಜೀವ,  ಮಗಳ ಮದುವೆಯಲ್ಲೇ ತಂದೆ ಹೃದಯಾಘಾತದಿಂದ ಸಾವು
ಹೃದಯಾಘಾತದಿಂದ ವ್ಯಕ್ತಿ ಸಾವುImage Credit source: Namaste Talangana
Follow us
ನಯನಾ ರಾಜೀವ್
|

Updated on: Feb 23, 2025 | 8:31 AM

ತೆಲಂಗಾಣ, ಫೆಬ್ರವರಿ 23: ಮಗಳ ಮದುವೆ ನಡೆಯುವ ವೇಳೆ ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗಳ ಮದುವೆಯೆಂದು ಖುಷಿ ಖುಷಿಯಿಂದ ಓಡಾಡಿದ್ದ ಅಪ್ಪ, ಮಗಳ ಮದುವೆ ದಿನವೇ ಜವಾಬ್ದಾರಿ ಮುಗಿಸಿ ಕೊನೆಯುಸಿರೆಳೆದಿದ್ದಾರೆ.

ಬಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ ಬಾಲಚಂದ್ರಂ, ಮದುವೆ ಮಂಟಪದಲ್ಲಿ ಕುಸಿದು ಬಿದ್ದರು. ಅವರನ್ನು ಕಾಮರೆಡ್ಡಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ನಡೆದಾಗ ಮದುವೆ ಮುಗಿದಿತ್ತು. ಕೆಲವೇ ಕ್ಷಣಗಳ ಹಿಂದೆ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದ ಸಂಬಂಧಿಕರು ಮತ್ತು ಅತಿಥಿಗಳು ಆಘಾತಕ್ಕೊಳಗಾದರು.

ಶುಕ್ರವಾರ ಭಿಕನೂರ್ ಮಂಡಲದ ಜಂಗಂಪಲ್ಲಿ ಗ್ರಾಮದ ಮದುವೆ ಮಂಟಪದಲ್ಲಿ ಈ ಘಟನೆ ನಡೆದಿದೆ. ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ 56 ವರ್ಷದ ಕುಡಿಕ್ಯಾಲ ಬಾಲಚಂದ್ರಂ ಅವರು ತಮ್ಮ ಹಿರಿಯ ಮಗಳು ಕನಕ ಮಹಾಲಕ್ಷ್ಮಿಯ ವಿವಾಹದಲ್ಲಿ ತುಂಬಾ ಸಂತೋಷದಿಂದಿದ್ದರು. ಕನ್ಯಾದಾನದ ನಂತರ ತಂದೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು . ಬೆಂಗಳೂರಿನ ರಾಘವೇಂದ್ರ ಅವರೊಂದಿಗೆ ಮದುವೆ ನಡೆದಿತ್ತು.

ಮತ್ತಷ್ಟು ಓದಿ: ಹೈಕೋರ್ಟ್‌ನಲ್ಲಿ ವಾದಿಸುತ್ತಿದ್ದಾಗಲೇ ಹೃದಯಾಘಾತದಿಂದ ಹಿರಿಯ ವಕೀಲ ಸಾವು

ಕುಸಿದು ಬಿದ್ದ ತಕ್ಷಣ ಮದುವೆಯಲ್ಲಿದ್ದ ಸಂಬಂಧಿಕರು ಮತ್ತು ಕುಟುಂಬ ಸದಸ್ಯರು ಭಯಭೀತರಾದರು. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಪರೀಕ್ಷೆಯ ನಂತರ ವೈದ್ಯರು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಿದರು. ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ನಿರ್ಮಾಣವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?