AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ದೇವಾಲಯದಲ್ಲಿ ಪಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ಗುರುವಾರ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯ ನೋಡಿದಾಗ, ರಾಜೇಶ್ ಮೆಹಾನಿ ಎಂಬ ಸಾಯಿ ಭಕ್ತರು ದೇವಾಲಯದಲ್ಲಿ ವಿಗ್ರಹಕ್ಕೆ ಪ್ರದಕ್ಷಿಣೆ ಮಾಡುತ್ತಿರುವುದನ್ನು ತೋರಿಸುತ್ತದೆ. ನಂತರ ಅವರು ಪ್ರಾರ್ಥನೆ ಮಾಡಲು ಕುಳಿತಿದ್ದಾರೆ. ಆದರೆ ಅಲ್ಲಿಂದ ಎದ್ದೇಳಲು ಸಾಧ್ಯವಾಗಲೇ ಇಲ್ಲ

ಮಧ್ಯಪ್ರದೇಶ: ದೇವಾಲಯದಲ್ಲಿ ಪಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು
ಪ್ರಾರ್ಥಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು (ವಿಡಿಯೊದಿಂದ ಸೆರೆಹಿಡಿದ ಚಿತ್ರ) Image Credit source: NDTV
TV9 Web
| Edited By: |

Updated on: Dec 04, 2022 | 7:25 PM

Share

ಕಟ್ನಿ (ಮಧ್ಯಪ್ರದೇಶ): ಮಧ್ಯಪ್ರದೇಶದ (Madhya Pradesh) ಕಟ್ನಿಯಲ್ಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಹೃದಯಾಘಾತದಿಂದ(heart attack) ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ವರದಿಯಾಗಿದೆ. ಗುರುವಾರ ನಡೆದ ಈ ಘಟನೆಯ ಸಿಸಿಟಿವಿ ದೃಶ್ಯ ನೋಡಿದಾಗ, ರಾಜೇಶ್ ಮೆಹಾನಿ ಎಂಬ ಸಾಯಿ ಭಕ್ತರು ದೇವಾಲಯದಲ್ಲಿ ವಿಗ್ರಹಕ್ಕೆ ಪ್ರದಕ್ಷಿಣೆ ಮಾಡುತ್ತಿರುವುದನ್ನು ತೋರಿಸುತ್ತದೆ. ನಂತರ ಅವರು ಪ್ರಾರ್ಥನೆ ಮಾಡಲು ಕುಳಿತಿದ್ದಾರೆ. ಆದರೆ ಅಲ್ಲಿಂದ ಎದ್ದೇಳಲು ಸಾಧ್ಯವಾಗಲೇ ಇಲ್ಲ. ಇದು ಸೈಲೆಂಟ್ ಹಾರ್ಟ್ ಅಟ್ಯಾಕ್ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸುಮಾರು 15 ನಿಮಿಷಗಳ ಕಾಲ ವ್ಯಕ್ತಿ ಪ್ರತಿಕ್ರಿಯಿಸದಿದ್ದಾಗ ದೇವಸ್ಥಾನದಲ್ಲಿದ್ದ ಇತರ ಭಕ್ತರು ಅರ್ಚಕರನ್ನು ಕರೆದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿಗೆ ತಲುಪಿದಾಗ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಅಧಿಕಾರಿಗಳ ಪ್ರಕಾರ, ಮೆಹಾನಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದು, ಪ್ರತಿ ಗುರುವಾರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು.

ಶುಕ್ರವಾರ, ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಬಸ್ ಚಾಲಕ ಹಠಾತ್ ಹೃದಯಾಘಾತದಿಂದ ಅದರ ಚಾಲಕ ಸಾವನ್ನಪ್ಪಿದ್ದು, ನಿಯಂತ್ರಣ ತಪ್ಪಿದ ಬಸ್ ಇನ್ನೊಬ್ಬ ವ್ಯಕ್ತಿಗೆ ಗುದ್ದಿ ಆ ವ್ಯಕ್ತಿಸಾವಿಗೀಡಾಗಿದ್ದರು. ಈ ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿತ್ತು.

ಆರೋಗ್ಯ ತಜ್ಞರ ಪ್ರಕಾರ, ಸೈಲೆಂಟ್ ಹೃದಯಾಘತವನ್ನು ಸೈಲೆಂಟ್ ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ (SMI) ಎಂದು ಕರೆಯಲಾಗುತ್ತದೆ. ಈ ಹೃದಯಾಘಾತದ ಹೊತ್ತಲ್ಲಿ ತೀವ್ರವಾದ ಎದೆ ನೋವು, ಒತ್ತಡ, ಹಠಾತ್ ಉಸಿರಾಟದ ತೊಂದರೆ ಮತ್ತು ತಲೆತಿರುಗುವಿಕೆ ಯಾವುದೂ ಇರುವುದಿಲ್ಲ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?