AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿ ಮೃತಪಟ್ಟ ವ್ಯಕ್ತಿಯ ಚಿತೆಗೆ ಅದೇ ಹಾವನ್ನು ಹಾಕಿ ಕೊಂದ ಜನ

ವ್ಯಕ್ತಿಯೊಬ್ಬರು ವಿಷಕಾರಿ ಹಾವು ಕಚ್ಚಿ ಸಾವನ್ನಪ್ಪಿದ್ದರು, ಸ್ಥಳೀಯರು ಅದೇ ಹಾವನ್ನು ಹಿಡಿದು ವ್ಯಕ್ತಿಯ ಚಿತೆಗೆ ಹಾಕಿ ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಕೆಲವು ಸ್ಥಳೀಯರು ಹಾವು ಬೇರೆಯವರಿಗೆ ಹಾನಿ ಮಾಡಬಹುದೆಂಬ ಭಯದಿಂದ ಅದನ್ನು ಚಿತೆಯ ಮೇಲೆ ಎಸೆದು ಸುಟ್ಟು ಹಾಕಿದ್ದಾರೆ.

ಹಾವು ಕಚ್ಚಿ ಮೃತಪಟ್ಟ ವ್ಯಕ್ತಿಯ ಚಿತೆಗೆ ಅದೇ ಹಾವನ್ನು ಹಾಕಿ ಕೊಂದ ಜನ
ಹಾವುImage Credit source: World Atlas
ನಯನಾ ರಾಜೀವ್
|

Updated on: Sep 23, 2024 | 2:39 PM

Share

ವ್ಯಕ್ತಿಯೊಬ್ಬರು ವಿಷಕಾರಿ ಹಾವು ಕಚ್ಚಿ ಸಾವನ್ನಪ್ಪಿದ್ದರು, ಸ್ಥಳೀಯರು ಅದೇ ಹಾವನ್ನು ಹಿಡಿದು ವ್ಯಕ್ತಿಯ ಚಿತೆಗೆ ಹಾಕಿ ಹತ್ಯೆ ಮಾಡಿರುವ ಘಟನೆ ಛತ್ತೀಸ್​ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಕೆಲವು ಸ್ಥಳೀಯರು ಹಾವು ಬೇರೆಯವರಿಗೆ ಹಾನಿ ಮಾಡಬಹುದೆಂಬ ಭಯದಿಂದ ಅದನ್ನು ಚಿತೆಯ ಮೇಲೆ ಎಸೆದು ಸುಟ್ಟು ಹಾಕಿದ್ದಾರೆ.

ಈ ಸರೀಸೃಪಗಳು ಮತ್ತು ಹಾವು ಕಡಿತದ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಕೆಲವು ವ್ಯಕ್ತಿಗಳು ಹಗ್ಗವನ್ನು ಬಳಸಿ ಹಾವನ್ನು ಎಳೆಯುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಶನಿವಾರ ರಾತ್ರಿ ಬೈಗಾಮಾರ್ ಗ್ರಾಮದ ತನ್ನ ಮನೆಯ ಕೋಣೆಯಲ್ಲಿ ಹಾಸಿಗೆಯನ್ನು ಜೋಡಿಸುತ್ತಿದ್ದಾಗ ದಿಗೇಶ್ವರ ಎಂಬುವವರಿಗೆ ಹಾವು ಕಡಿದಿದೆ. ಈ ಬಗ್ಗೆ ರಥಿಯಾ ಅವರ ಕುಟುಂಬಕ್ಕೆ ಮಾಹಿತಿ ನೀಡಿದ ನಂತರ ಅವರನ್ನು ಕೊರ್ಬಾದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಚಿಕಿತ್ಸೆ ನೀಡುವ ಸಮಯದಲ್ಲಿ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಹಾವು ಕಡಿತ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ: ಸಾವನ್ನಪ್ಪುವವರ ಸಂಖ್ಯೆ ಏರಿಕೆ

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ ಗ್ರಾಮಸ್ಥರು ಹಾವನ್ನು ಹಿಡಿದು ಮುಚ್ಚಿದ ಬುಟ್ಟಿಯೊಳಗೆ ಇಡುವಲ್ಲಿ ಯಶಸ್ವಿಯಾದರು. ಬಳಿಕ ಕೋಲಿಗೆ ನೇತು ಹಾಕಿದ ಹಗ್ಗದಿಂದ ಹಾವನ್ನು ಕಟ್ಟಿ ಹಾಕಿದ್ದಾರೆ.

ಅಂತ್ಯಕ್ರಿಯೆಗೆ ರಥಿಯಾ ಮನೆಯಿಂದ ದೇಹವನ್ನು ಸ್ಮಶಾನಕ್ಕೆ ಕೊಂಡೊಯ್ಯುವಾಗ, ಗ್ರಾಮಸ್ಥರು ಹಾವನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದರು. ನಂತರ, ಅಂತ್ಯಕ್ರಿಯೆಯ ಚಿತೆಗೆ ಹಾವನ್ನು ಹಾಕಿ ಜೀವಂತವಾಗಿ ಸುಟ್ಟುಹಾಕಿದರು. ವಿಷಕಾರಿ ಹಾವು ಬೇರೊಬ್ಬರನ್ನು ಕಚ್ಚಬಹುದೆಂಬ ಭಯದಿಂದ ಅದನ್ನು ಚಿತೆಗೆ ಸುಟ್ಟು ಹಾಕಿದ್ದೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್