AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್ ಜಂಪ್ ಮಾಡಿ, ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 1.5 ಕಿ.ಮೀ ಎಳೆದೊಯ್ದ ಚಾಲಕ

ಟ್ರಾಫಿಕ್ ಸಿಗ್ನಲ್ ದಾಟದಂತೆ ತಡೆದ ಟ್ರಾಫಿಕ್​ ಪೊಲೀಸರನ್ನು ಕಾರಿನ ಬಾನೆಟ್​ ಮೇಲೆ ಸುಮಾರು ಒಂದೂವರೆ ಕಿಲೋಮೀಟರ್​ನಷ್ಟು ಎಳೆದೊಯ್ದ ಘಟನೆ ಮಹಾರಾಷ್ಟ್ರದ ಪಾಲಘಡದಲ್ಲಿ ನಡೆದಿದೆ.

ಸಿಗ್ನಲ್ ಜಂಪ್ ಮಾಡಿ, ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 1.5 ಕಿ.ಮೀ ಎಳೆದೊಯ್ದ ಚಾಲಕ
ಕಾರುImage Credit source: IndiaToday
TV9 Web
| Edited By: |

Updated on: Feb 14, 2023 | 10:25 AM

Share

ಟ್ರಾಫಿಕ್ ಸಿಗ್ನಲ್ ದಾಟದಂತೆ ತಡೆದ ಟ್ರಾಫಿಕ್​ ಪೊಲೀಸರನ್ನು ಕಾರಿನ ಬಾನೆಟ್​ ಮೇಲೆ ಸುಮಾರು ಒಂದೂವರೆ ಕಿಲೋಮೀಟರ್​ನಷ್ಟು ಎಳೆದೊಯ್ದ ಘಟನೆ ಮಹಾರಾಷ್ಟ್ರದ ಪಾಲಘಡದಲ್ಲಿ ನಡೆದಿದೆ. ಮಾಣಿಕಪುರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಪತ್ರಾವ್ ಪಾಟೀಲ್ ಮಾತನಾಡಿ, ಕಾರು ಚಾಲಕನಿಗೆ 19 ವರ್ಷ ವಯಸ್ಸಾಗಿದ್ದು, ಅವರ ಬಳಿ ಸರಿಯಾದ ಪರವಾನಗಿ ಕೂಡ ಇಲ್ಲ. ಭಾನುವಾರ ಈ ಘಟನೆ ನಡೆದಿದೆ ಎಂದು ತಿಳಿಸಿದರು.

ಕಾನ್ಸ್‌ಟೇಬಲ್‌ ವಿಚಾರಣೆ ನಡೆಸುತ್ತಿದ್ದಾಗ ಚಾಲಕ ಏಕಾಏಕಿ ಕಾರಿನ ವೇಗ ಹೆಚ್ಚಿಸಿ ಪೊಲೀಸರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಹೇಳಿದರು. ಡಿಕ್ಕಿ ಹೊಡೆದ ನಂತರ ಪೊಲೀಸರು ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಈ ಸ್ಥಿತಿಯಲ್ಲಿ, ಚಾಲಕ ಸುಮಾರು ಒಂದೂವರೆ ಕಿಲೋಮೀಟರ್ ವಾಹನ ಚಲಾಯಿಸುವುದನ್ನು ಮುಂದುವರೆಸಿದ್ದು, ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟ್ರಾಫಿಕ್ ಜಾಮ್‌ನಿಂದ ಕಾರು ನಿಲ್ಲಿಸಿದ್ದು, ದಾರಿಹೋಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಇನ್ಸ್‌ಪೆಕ್ಟರ್ ಪಾಟೀಲ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಮುಂಬೈ ಡೌನ್‌ಟೌನ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ವಸಾಯಿ ಉಪನಗರದಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಟ್ರಾಫಿಕ್ ಪೊಲೀಸ್ ಪೇದೆ ಸೋಮನಾಥ್ ಚೌಧರಿ ಅವರನ್ನು ಕಾರಿನಿಂದ ಬಾನೆಟ್ ಮೇಲೆ ಎಳೆದುಕೊಂಡು ಹೋಗುವುದನ್ನು ತೋರಿಸಿವೆ.

ಚಾಲಕ ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಕಾರು ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ), 308 (ಅಪರಾಧ ನರಹತ್ಯೆ ಮಾಡಲು ಯತ್ನ) ಮತ್ತು 353 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯದಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲ) ಮತ್ತು ಮೋಟಾರು ವಾಹನ ಕಾಯ್ದೆಯ ಇತರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರು ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದು, ಅವರು ಸಿಗ್ನಲ್ ಜಂಪ್ ಮಾಡಿದಾಗ, ಟ್ರಾಫಿಕ್ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ನಿಲ್ಲಿಸಲು ಹೇಳಿದರು ಮತ್ತು ವಿವರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು. ಆಗ ಸಿಗ್ನಲ್ ಜಂಪ್ ಮಾಡಿ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ