AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಟಿಯಲ್ಲಿ ಲಿಪ್​ಸ್ಟಿಕ್​, ಕೈಯಲ್ಲಿ ನಕಲಿ ಆಧಾರ್, ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ

ತನ್ನ ಗೆಳತಿಯ ಪರೀಕ್ಷೆ(Exam) ಬರೆಯಲು ಹೆಣ್ಣು ವೇಷ ತೊಟ್ಟು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಫಾಜಿಲ್ಕಾ ಮೂಲದ ಆಂಗ್ರೇಜ್ ಸಿಂಗ್ ಬಂಧಿತ ಆರೋಪಿ. ಇನ್ವಿಜಿಲೇಟರ್ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲು ಯುವಕ ಮಹಿಳೆಯ ವೇಷದಲ್ಲಿ ಪರೀಕ್ಷೆಗೆ ಹಾಜರಾಗಿದ್ದು, ಇದರ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಸೇರಿದಂತೆ ಗುರುತಿನ ಚೀಟಿಗಳನ್ನು ನಕಲಿ ಮಾಡಲಾಗಿದೆ.

ತುಟಿಯಲ್ಲಿ ಲಿಪ್​ಸ್ಟಿಕ್​, ಕೈಯಲ್ಲಿ ನಕಲಿ ಆಧಾರ್, ಗೆಳತಿಗಾಗಿ ಹೆಣ್ಣು ವೇಷ ತೊಟ್ಟು ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ ಗೆಳೆಯ
Image Credit source: NDTV
ನಯನಾ ರಾಜೀವ್
|

Updated on: Jan 15, 2024 | 3:19 PM

Share

ತನ್ನ ಗೆಳತಿಯ ಪರೀಕ್ಷೆ(Exam) ಬರೆಯಲು ಹೆಣ್ಣು ವೇಷ ತೊಟ್ಟು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಫಾಜಿಲ್ಕಾ ಮೂಲದ ಆಂಗ್ರೇಜ್ ಸಿಂಗ್ ಬಂಧಿತ ಆರೋಪಿ. ಇನ್ವಿಜಿಲೇಟರ್ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲು ಯುವಕ ಮಹಿಳೆಯ ವೇಷದಲ್ಲಿ ಪರೀಕ್ಷೆಗೆ ಹಾಜರಾಗಿದ್ದು, ಇದರ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್ ಸೇರಿದಂತೆ ಗುರುತಿನ ಚೀಟಿಗಳನ್ನು ನಕಲಿ ಮಾಡಲಾಗಿದೆ.

ಪಂಜಾಬ್ ನ ಫರೀದ್ ಕೋಟ್ ನಲ್ಲಿ ಜನವರಿ 7 ರಂದು ಈ ಘಟನೆ ನಡೆದಿದೆ. ಬಾಬಾ ಫರೀದ್ ಹೆಲ್ತ್ ಯೂನಿವರ್ಸಿಟಿಯಲ್ಲಿ ಮಲ್ಟಿ ಪರ್ಪಸ್ ಹೆಲ್ತ್ ವರ್ಕರ್ ಹುದ್ದೆಗೆ ಪರೀಕ್ಷೆ ಬರೆಯಲು ಆಂಗ್ರೇಸ್ ಸಿಂಗ್ ಕೊಟ್ಕಾಪುರದ ಡಿಎವಿ ಪಬ್ಲಿಕ್ ಸ್ಕೂಲ್ ಗೆ ಬಂದಿದ್ದರು.

ತನ್ನ ಗೆಳತಿ ಪರಮ್‌ಜಿತ್ ಕೌರ್‌ಗಾಗಿ ಈ ಸಾಹಸಕ್ಕೆ ಸಿದ್ಧನಾಗಿದ್ದಾನೆ. ಮಹಿಳೆಯರ ಬಟ್ಟೆಯ ಹೊರತಾಗಿ, ಆಂಗ್ರೇಸ್ ಸಿಂಗ್ ತನ್ನ ತುಟಿಗಳಿಗೆ ಲಿಪ್ಸ್ಟಿಕ್, ಬಳೆಗಳು ಮತ್ತು ಮಡಕೆಯನ್ನು ಸಹ ಧರಿಸಿದ್ದರು.

ಆದರೆ ಬಯೋಮೆಟ್ರಿಕ್ ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದಾನೆ. ಬೆರಳಚ್ಚು ಹೊಂದಿಕೆಯಾಗದಿದ್ದಾಗ ಅಧಿಕಾರಿಗಳಿಗೆ ವಂಚನೆ ಅರಿವಾಯಿತು. ಪೊಲೀಸರು ಆಂಗ್ರೇಸ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪರಮ್‌ಜಿತ್ ಕೌರ್ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು