AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದಂಗಡಿ ಎದುರು ಕೊಳೆತ ಶವ ಎಸೆದ ವ್ಯಕ್ತಿ

ಮಾಂಸದಂಗಡಿಯವರು ಮಾಂಸ ಕೊಟ್ಟಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಕೊಳೆತ ಶವವನ್ನು ಆತನ ಅಂಗಡಿ ಎದುರು ಎಸೆದು ಹೋಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕುಮಾರ್ ಎಂಬಾತ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ, ಮಣಿಯರಸನ್ ನಡೆಸುತ್ತಿದ್ದ ಅಂಗಡಿಯಲ್ಲಿ ಕಾಯಂ ಗ್ರಾಹಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಕುಮಾರ್ ಅಂಗಡಿಗೆ ಹೋಗಿ ಮಾಂಸ ಕೇಳಿದ್ದ, ಆದರೆ ಮಣಿಯರಸನ್ ಆತನಿಗೆ ಮಾಂಸ ಕೊಡುವುದಿಲ್ಲ ಎಂದು ಹೇಳಿದ್ದರು.

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದಂಗಡಿ ಎದುರು ಕೊಳೆತ ಶವ ಎಸೆದ ವ್ಯಕ್ತಿ
ಜನರು Image Credit source: India Today
ನಯನಾ ರಾಜೀವ್
|

Updated on: Feb 10, 2025 | 8:54 AM

Share

ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಮಾಂಸದ ಅಂಗಡಿ ಎದುರು ವ್ಯಕ್ತಿಯೊಬ್ಬ ಕೊಳೆತ ಶವವನ್ನು ಎಸೆದಿರುವ ಘಟನೆ ತಮಿಳುನಾಡಿನ ಪಳನಿ ಚೆಟ್ಟಿಪಟ್ಟಿಯಲ್ಲಿ ನಡೆದಿದೆ. ಮಾಂಸ ಕೊಟ್ಟಿಲ್ಲ ಎನ್ನುವ ಕೋಪಕ್ಕೆ ಶವವನ್ನು ಅಂಗಡಿ ಎದುರು ಎಸೆದಿದ್ದಾರೆ.

ಕುಮಾರ್ ಎಂಬಾತ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ, ಮಣಿಯರಸನ್ ನಡೆಸುತ್ತಿದ್ದ ಅಂಗಡಿಯಲ್ಲಿ ಕಾಯಂ ಗ್ರಾಹಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಕುಮಾರ್ ಅಂಗಡಿಗೆ ಹೋಗಿ ಮಾಂಸ ಕೇಳಿದ್ದ, ಆದರೆ ಮಣಿಯರಸನ್ ಆತನಿಗೆ ಮಾಂಸ ಕೊಡುವುದಿಲ್ಲ ಎಂದು ಹೇಳಿದ್ದರು. ಇದು ಸಣ್ಣ ಜಗಳವೆಂದು ಅಂಗಡಿಯವರು ಅಂದುಕೊಂಡಿದ್ದರು.

ಕುಮಾರ್ ಅಲ್ಲಿಂದ ಹೊರಟು ಹೋದ, ನಂತರ ಸ್ಮಶಾನಕ್ಕೆ ಹೋಗಿ ಅರ್ಧ ಕೊಳೆತ ಶವವನ್ನು ತೆಗೆದುಕೊಂಡು ಬಂದು, ಅಂಗಡಿಯ ಮುಂದೆ ಎಸೆದು ಪರಾರಿಯಾಗಿದ್ದಾನೆ. ಇದನ್ನು ನೋಡಿ ಅಂಗಿಯವರು ಹಾಗೂ ಗ್ರಾಹಕರು ಒಮ್ಮೆ ಬೆಚ್ಚಿಬಿದ್ದಾರೆ, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅವರು ಬಂದು ತನಿಖೆ ನಡೆಸಿದಾಗ ಈತನೇ ಶವ ಎಸೆದಿರಬಹುದು ಎಂದು ಅಂದಾಜಿಸಲಾಯಿತು.

ಮತ್ತಷ್ಟು ಓದಿ: ಕೊಲೆ ಮಾಡಿ ಹೆಣದ ಜೊತೆ ತ್ರಿಬಲ್ ರೈಡ್ ಹೋಗಿ ಹೆಣ ಎಸೆದು ಬಂದ ಆರೋಪಿಗಳ ಬಂಧನ

ಅಧಿಕಾರಿಗಳು ಆಗಮಿಸಿ, ಶವವನ್ನು ಹೊರತೆಗೆದು ಶವಾಗಾರ ವ್ಯಾನ್‌ನಲ್ಲಿ ಸ್ಮಶಾನಕ್ಕೆ ಸಾಗಿಸಿದರು. ಪೊಲೀಸರು ಕುಮಾರ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ