AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಎರಡೂ ಕಾಲುಗಳನ್ನು ಕಳೆದುಕೊಂಡ ಯುವಕ

ರೈಲು ನಿಲ್ದಾಣದಲ್ಲಿ ಸಂಪೂರ್ಣವಾಗಿ ನಿಲ್ಲುವವರೆಗೂ ಪ್ರಯಾಣಿಕರು ರೈಲನ್ನು ಇಳಿಯುವ ಸಾಹಸಕ್ಕೆ ಕೈ ಹಾಕಬಾರದು. ಹಾಗೆಯೇ ರೈಲು ಹೊರಟಿರುವಾಗ ತಡವಾಗಿ ಬಂದ ಪ್ರಯಾಣಿಕರು ತರಾತುರಿಯಲ್ಲಿ ರೈಲು ಹತ್ತಲು ಹೋಗಿ ಪೆಟ್ಟು ಮಾಡಿಕೊಂಡಿರುವ ಅನೇಕ ನಿದರ್ಶನಗಳಿವೆ. ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಎರಡೂ ಕಾಲುಗಳನ್ನು ಕಳೆದುಕೊಂಡ ಯುವಕ
ರೈಲುImage Credit source: India Today
ನಯನಾ ರಾಜೀವ್
|

Updated on: Aug 24, 2023 | 8:25 AM

Share

ರೈಲು ನಿಲ್ದಾಣದಲ್ಲಿ ಸಂಪೂರ್ಣವಾಗಿ ನಿಲ್ಲುವವರೆಗೂ ಪ್ರಯಾಣಿಕರು ರೈಲನ್ನು ಇಳಿಯುವ ಸಾಹಸಕ್ಕೆ ಕೈ ಹಾಕಬಾರದು. ಹಾಗೆಯೇ ರೈಲು ಹೊರಟಿರುವಾಗ ತಡವಾಗಿ ಬಂದ ಪ್ರಯಾಣಿಕರು ತರಾತುರಿಯಲ್ಲಿ ರೈಲು ಹತ್ತಲು ಹೋಗಿ ಪೆಟ್ಟು ಮಾಡಿಕೊಂಡಿರುವ ಅನೇಕ ನಿದರ್ಶನಗಳಿವೆ. ಮಹಾರಾಷ್ಟ್ರದಲ್ಲಿ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಯುವಕನೊಬ್ಬ ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸುತ್ತಿದ್ದಾಗ ರೈಲ್ವೇ ಹಳಿ ಮೇಲೆ ಬಿದ್ದಿದ್ದಾನೆ. ಮಂಗಳವಾರ ಬೆಳಗ್ಗೆ ಕಿನ್ವಾಟ್ ರೈಲು ನಿಲ್ದಾಣದಿಂದ ನಾಂದೇಡ್-ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲು ಹತ್ತಲು ವ್ಯಕ್ತಿ ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ.

ರೈಲು ನಿಂತಿದ್ದಾಗ ಹತ್ತದೇ ರೈಲು ಹೊರಟ ಮೇಲೆ ಮಹೇಶ್ ಕನ್ನೇಕರ್ ರೈಲು ಹತ್ತುವುದಕ್ಕೆ ಮುಂದಾಗಿದ್ದರು. ರೈಲು ಹತ್ತಲು ಹೋದಾಗ ಯುವಕ ಪ್ಲಾಟ್​ಫಾರಂ ಹಾಗೂ ರೈಲಿನ ನಡುವೆ ಸಿಲುಕಿಬಿಟ್ಟರು, ಜಾರಿ ಬಿದ್ದು, ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು

ಮಹೇಶ್​ ಅವರನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಕಿನ್ವಾಟ್‌ನಲ್ಲಿರುವ ಗೋಕುಂದ ಜಿಲ್ಲಾ ಉಪ-ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರ ಗಾಯಗಳ ತೀವ್ರತೆಯಿಂದಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆದಿಲಾಬಾದ್ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ