AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು

ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು
ಇಶಾನ್​ ಮಿಯಾ
TV9 Web
| Edited By: |

Updated on: Nov 07, 2021 | 5:36 PM

Share

ರಾಂಪುರ: ಟಿ-20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ್ದಾಳೆ ಎಂದು ಪತ್ನಿಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಪತ್ನಿಯಷ್ಟೇ ಅಲ್ಲ ಆಕೆಯ ಇಡೀ ಕುಟುಂಬದವರ ವಿರುದ್ಧವೇ ದೂರು ನೀಡಿರುವ ಪರಿಣಾಮ ಇದೀಗ ಅವರೆಲ್ಲರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.  ಈ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಎಸ್​ಪಿ ಅಂಕಿತ್​ ಮಿತ್ತಲ್​, ಅಕ್ಟೋಬರ್​ 24ರಂದ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಭಾರತ ಸೋತ ನಂತರ ಭಾರತೀಯ ಕ್ರಿಕೆಟ್​ ತಂಡವನ್ನು ಅಣುಕಿಸಿ, ಪಾಕಿಸ್ತಾನದ ಗೆಲುವು ಸಂಭ್ರಮಿಸಿದ್ದಾರೆ ಎಂದು ಇಶಾನ್​ ಮಿಯಾ ಎಂಬುವರು ತಮ್ಮ ಪತ್ನಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ಇದೀಗ ಎಫ್​ಐಆರ್​ ದಾಖಲು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 

ಇಶಾನ್​ ಮಿಯಾ ರಾಂಪುರದ ಅಝೀಂ ನಗರದವರಾಗಿದ್ದು ಇವರ ಪತ್ನಿಯ ಹೆಸರು ರಬಿಯಾ ಶಂಸಿ. ಅಕ್ಟೋಬರ್ 24ರಂದು ಪಾಕಿಸ್ತಾನ ಗೆಲ್ಲುತ್ತಿದ್ದಂತೆ ರಬಿಯಾ ಮತ್ತು ಆಕೆಯ ಕುಟುಂಬದವರು ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಪಾಕ್​ ವಿಜಯದ ಖುಷಿಯನ್ನು ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ರಾಂಪುರ ಜಿಲ್ಲೆಯ ಗಂಜ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.  ಈ ದಂಪತಿ ಒಟ್ಟಿಗೆ ಇರಲಿಲ್ಲ. ಮದುವೆಯಾಗಿ ಕೆಲವೇ ದಿನಗಳಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದಾರೆ. ಆಕೆ ತನ್ನ ತಂದೆ-ತಾಯಿಯೊಟ್ಟಿಗೆ ವಾಸವಾಗಿದ್ದಳು.

ಇನ್ನು ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು. ಇನ್ನು  ಲಖನೌದಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದ ಮೂವರು ಕಾಶ್ಮೀರದ ವಿದ್ಯಾರ್ಥಿಗಳನ್ನು ಇದೇ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ ‘ಅಣ್ಣಾಥೆ’; ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದ ರಜನಿ ಸಿನಿಮಾ

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ