AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು

ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು
ಇಶಾನ್​ ಮಿಯಾ
TV9 Web
| Edited By: |

Updated on: Nov 07, 2021 | 5:36 PM

Share

ರಾಂಪುರ: ಟಿ-20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ್ದಾಳೆ ಎಂದು ಪತ್ನಿಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಪತ್ನಿಯಷ್ಟೇ ಅಲ್ಲ ಆಕೆಯ ಇಡೀ ಕುಟುಂಬದವರ ವಿರುದ್ಧವೇ ದೂರು ನೀಡಿರುವ ಪರಿಣಾಮ ಇದೀಗ ಅವರೆಲ್ಲರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.  ಈ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಎಸ್​ಪಿ ಅಂಕಿತ್​ ಮಿತ್ತಲ್​, ಅಕ್ಟೋಬರ್​ 24ರಂದ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಭಾರತ ಸೋತ ನಂತರ ಭಾರತೀಯ ಕ್ರಿಕೆಟ್​ ತಂಡವನ್ನು ಅಣುಕಿಸಿ, ಪಾಕಿಸ್ತಾನದ ಗೆಲುವು ಸಂಭ್ರಮಿಸಿದ್ದಾರೆ ಎಂದು ಇಶಾನ್​ ಮಿಯಾ ಎಂಬುವರು ತಮ್ಮ ಪತ್ನಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ಇದೀಗ ಎಫ್​ಐಆರ್​ ದಾಖಲು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 

ಇಶಾನ್​ ಮಿಯಾ ರಾಂಪುರದ ಅಝೀಂ ನಗರದವರಾಗಿದ್ದು ಇವರ ಪತ್ನಿಯ ಹೆಸರು ರಬಿಯಾ ಶಂಸಿ. ಅಕ್ಟೋಬರ್ 24ರಂದು ಪಾಕಿಸ್ತಾನ ಗೆಲ್ಲುತ್ತಿದ್ದಂತೆ ರಬಿಯಾ ಮತ್ತು ಆಕೆಯ ಕುಟುಂಬದವರು ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಪಾಕ್​ ವಿಜಯದ ಖುಷಿಯನ್ನು ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ರಾಂಪುರ ಜಿಲ್ಲೆಯ ಗಂಜ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.  ಈ ದಂಪತಿ ಒಟ್ಟಿಗೆ ಇರಲಿಲ್ಲ. ಮದುವೆಯಾಗಿ ಕೆಲವೇ ದಿನಗಳಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದಾರೆ. ಆಕೆ ತನ್ನ ತಂದೆ-ತಾಯಿಯೊಟ್ಟಿಗೆ ವಾಸವಾಗಿದ್ದಳು.

ಇನ್ನು ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು. ಇನ್ನು  ಲಖನೌದಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದ ಮೂವರು ಕಾಶ್ಮೀರದ ವಿದ್ಯಾರ್ಥಿಗಳನ್ನು ಇದೇ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ ‘ಅಣ್ಣಾಥೆ’; ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದ ರಜನಿ ಸಿನಿಮಾ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ