AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು

ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು.

ಕ್ರಿಕೆಟ್​​ನಲ್ಲಿ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ ಪತ್ನಿ ವಿರುದ್ಧ ದೂರು ನೀಡಿದ ಪತಿ; ಎಫ್​ಐಆರ್​ ದಾಖಲು
ಇಶಾನ್​ ಮಿಯಾ
TV9 Web
| Edited By: |

Updated on: Nov 07, 2021 | 5:36 PM

Share

ರಾಂಪುರ: ಟಿ-20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿದ್ದಕ್ಕೆ ಸಂಭ್ರಮಿಸಿದ್ದಾಳೆ ಎಂದು ಪತ್ನಿಯ ವಿರುದ್ಧ ಆರೋಪ ಮಾಡಿರುವ ವ್ಯಕ್ತಿ ಪೊಲೀಸರಿಗೆ ದೂರನ್ನೂ ನೀಡಿದ್ದಾರೆ. ಪತ್ನಿಯಷ್ಟೇ ಅಲ್ಲ ಆಕೆಯ ಇಡೀ ಕುಟುಂಬದವರ ವಿರುದ್ಧವೇ ದೂರು ನೀಡಿರುವ ಪರಿಣಾಮ ಇದೀಗ ಅವರೆಲ್ಲರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.  ಈ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ನಡೆದಿದೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಎಸ್​ಪಿ ಅಂಕಿತ್​ ಮಿತ್ತಲ್​, ಅಕ್ಟೋಬರ್​ 24ರಂದ ಪಂದ್ಯಾವಳಿ ನಡೆದಿತ್ತು. ಇದರಲ್ಲಿ ಭಾರತ ಸೋತ ನಂತರ ಭಾರತೀಯ ಕ್ರಿಕೆಟ್​ ತಂಡವನ್ನು ಅಣುಕಿಸಿ, ಪಾಕಿಸ್ತಾನದ ಗೆಲುವು ಸಂಭ್ರಮಿಸಿದ್ದಾರೆ ಎಂದು ಇಶಾನ್​ ಮಿಯಾ ಎಂಬುವರು ತಮ್ಮ ಪತ್ನಿ ಹಾಗೂ ಆಕೆಯ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ಇದೀಗ ಎಫ್​ಐಆರ್​ ದಾಖಲು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 

ಇಶಾನ್​ ಮಿಯಾ ರಾಂಪುರದ ಅಝೀಂ ನಗರದವರಾಗಿದ್ದು ಇವರ ಪತ್ನಿಯ ಹೆಸರು ರಬಿಯಾ ಶಂಸಿ. ಅಕ್ಟೋಬರ್ 24ರಂದು ಪಾಕಿಸ್ತಾನ ಗೆಲ್ಲುತ್ತಿದ್ದಂತೆ ರಬಿಯಾ ಮತ್ತು ಆಕೆಯ ಕುಟುಂಬದವರು ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ. ಅಷ್ಟೇ ಅಲ್ಲ, ಪಾಕ್​ ವಿಜಯದ ಖುಷಿಯನ್ನು ವಾಟ್ಸ್​ಆ್ಯಪ್​ ಸ್ಟೇಟಸ್​ ಹಾಕುವ ಮೂಲಕ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ರಾಂಪುರ ಜಿಲ್ಲೆಯ ಗಂಜ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.  ಈ ದಂಪತಿ ಒಟ್ಟಿಗೆ ಇರಲಿಲ್ಲ. ಮದುವೆಯಾಗಿ ಕೆಲವೇ ದಿನಗಳಲ್ಲಿ ಇಬ್ಬರೂ ಪ್ರತ್ಯೇಕವಾಗಿದ್ದಾರೆ. ಆಕೆ ತನ್ನ ತಂದೆ-ತಾಯಿಯೊಟ್ಟಿಗೆ ವಾಸವಾಗಿದ್ದಳು.

ಇನ್ನು ಉತ್ತರ ಪ್ರದೇಶದಲ್ಲಿ ಯಾರಾದರೂ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದರೆ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದರು. ಇನ್ನು  ಲಖನೌದಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದ ಮೂವರು ಕಾಶ್ಮೀರದ ವಿದ್ಯಾರ್ಥಿಗಳನ್ನು ಇದೇ ಕಾರಣಕ್ಕೆ ಬಂಧಿಸಲಾಗಿತ್ತು.

ಇದನ್ನೂ ಓದಿ: ಶೀಘ್ರವೇ 200 ಕೋಟಿ ರೂಪಾಯಿ ಕ್ಲಬ್​ ಸೇರಲಿದೆ ‘ಅಣ್ಣಾಥೆ’; ಬಾಕ್ಸ್​ ಆಫೀಸ್​ ಉಡೀಸ್​ ಮಾಡಿದ ರಜನಿ ಸಿನಿಮಾ

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ