AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ವ್ಯಕ್ತಿಯ ಶಿರಚ್ಛೇದ, ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಗುಂಪು

ಮಣಿಪುರದ ಜಿರಿಬಾಮ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹೊಲದಿಂದ ಮನೆಗೆ ಬರುವಾಗ ದುಷ್ಕರ್ಮಿಗಳು ವ್ಯಕ್ತಿಯನ್ನು ಹಿಡಿದು ಥಳಿಸಿ, ಶಿರಚ್ಛೇದ ಮಾಡಿದ್ದಾರೆ, ದುಷ್ಕರ್ಮಿಗಳು ಯೆರಂಬುದು ಇನ್ನೂ ತಿಳಿದುಬಂದಿಲ್ಲ.

ಮಣಿಪುರ: ವ್ಯಕ್ತಿಯ ಶಿರಚ್ಛೇದ, ಹಲವು ಮನೆಗಳಿಗೆ ಬೆಂಕಿ ಹಚ್ಚಿದ ಗುಂಪು
Image Credit source: Hindustan Times
ನಯನಾ ರಾಜೀವ್
|

Updated on: Jun 07, 2024 | 8:48 AM

Share

ಮಣಿಪುರದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಹೆಚ್ಚಿದೆ, ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿರುವ ಘಟನೆ ವರದಿಯಾಗಿದೆ. ಬಲಿಯಾದವರನ್ನು ಸೋಬಾಮ್ ಶರತ್‌ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಶರತ್‌ಕುಮಾರ್ ಅವರು ಲೀಶಾಬಿಥೋಲ್‌ನಲ್ಲಿರುವ ತಮ್ಮ ಮಗನ ಜಮೀನಿನಿಂದ ಹಿಂತಿರುಗುತ್ತಿದ್ದಾಗ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಪೊಲೀಸರ ಪ್ರಕಾರ, ಶರತ್‌ಕುಮಾರ್ ಮನೆಗೆ ಹೋಗುತ್ತಿದ್ದಾಗ ಖಾಸಿಯಾ ಪುಂಜಿ ಬಳಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಕಟ್ಟಿಹಾಕಿದ್ದಾರೆ. ಅವರ ಕುಟುಂಬ ಸದಸ್ಯರು ಜಿರಿಬಾಮ್ ಜಿಲ್ಲಾ ಪೊಲೀಸರಿಗೆ ತಕ್ಷಣ ಘಟನೆ ಕುರಿತು ಮಾಹಿತಿ ನೀಡಿದ್ದಾರೆ, ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು.

ಜಿರಿಬಾಮ್ ಪೊಲೀಸ್ ಠಾಣೆಯಿಂದ ಉತ್ತರಕ್ಕೆ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಮುಲರ್ಗೋನ್ ಬಳಿ ಶರತ್​ಕುಮಾರ್ ದೇಹವು ಪತ್ತೆಯಾಗಿತ್ತು.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಹತ್ಯೆಯ ಹಿಂದಿನ ಉದ್ದೇಶ ಮತ್ತು ದಾಳಿಕೋರರ ಗುರುತು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮೃತರ ಪತ್ನಿ ಸೋಬಾಮ್ ರೊಮೊಲಾ ಅವರು, ತಾನು ಮತ್ತು ತನ್ನ ಮಗ ತನ್ನ ಪತಿಗಿಂತ ಮುಂಚಿತವಾಗಿ ಜಮೀನಿನಿಂದ ಹಿಂತಿರುಗುತ್ತಿದ್ದಾಗ ಕುಕಿ ಸಮುದಾಯದ ಕೆಲವರು ಬಂದಿದ್ದರು ಎಂದು ಹೇಳಿದ್ದಾರೆ.

ಶರತ್‌ಕುಮಾರ್‌ ಅವರ ಫೋನ್‌ ಸ್ವಿಚ್‌ ಆಫ್‌ ಆಗಿರುವುದು ಕಂಡುಬಂದಿತ್ತು, ಬಳಿಕ ಮಗ ಹುಡುಕಾಟ ನಡೆಸಿದಾಗ ತಂದೆಯ ಬೈಕ್ ಹಾಗೂ ಚಪ್ಪಲಿಗಳು ಸಿಕ್ಕಿದ್ದವು ಎಂದು ಹೇಳಿದ್ದಾರೆ. ಕೋಪಗೊಂಡ ಗುಂಪೊಂದು ಸಮೀಪದ ಪ್ರದೇಶದಲ್ಲಿ ಕುಕಿ ಸಮುದಾಯಕ್ಕೆ ಸೇರಿದ ಮನೆಗಳಿಗೆ ಬೆಂಕಿ ಹಚ್ಚಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ