AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಕಾಂಗ್ರೆಸ್​ ಶಾಸಕಿ ನೀತು ಸಿಂಗ್ ಮನೆಯಲ್ಲಿ ಯುವಕನ ಶವ ಪತ್ತೆ

ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಯೂಷ್ ಸಿಂಗ್, ನೀತು ಸಿಂಗ್ ಅವರ ದೂರದ ಸಂಬಂಧಿಯಾಗಿದ್ದು, ಪೊಲೀಸರು ಶವವನ್ನು ಪತ್ತೆ ಮಾಡಿದಾಗ ಶಾಸಕಿ ಅವರ ಮನೆಯಲ್ಲಿ ಇರಲಿಲ್ಲ ಎಂದು ನಾವಡಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಂಬರೀಶ್ ರಾಹುಲ್ ಹೇಳಿದ್ದಾರೆ.

ಬಿಹಾರದ ಕಾಂಗ್ರೆಸ್​ ಶಾಸಕಿ ನೀತು ಸಿಂಗ್ ಮನೆಯಲ್ಲಿ ಯುವಕನ ಶವ ಪತ್ತೆ
ನೀತು ಸಿಂಗ್ ಮನೆ Image Credit source: India Today
ನಯನಾ ರಾಜೀವ್
|

Updated on: Oct 29, 2023 | 12:21 PM

Share

ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರ ಮನೆಯಲ್ಲಿ 24 ವರ್ಷದ ಯುವಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಯೂಷ್ ಸಿಂಗ್, ನೀತು ಸಿಂಗ್ ಅವರ ದೂರದ ಸಂಬಂಧಿಯಾಗಿದ್ದು, ಪೊಲೀಸರು ಶವವನ್ನು ಪತ್ತೆ ಮಾಡಿದಾಗ ಶಾಸಕಿ ಅವರ ಮನೆಯಲ್ಲಿ ಇರಲಿಲ್ಲ ಎಂದು ನಾವಡಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಂಬರೀಶ್ ರಾಹುಲ್ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನೀತು ಸಿಂಗ್ ಪಾಟ್ನಾದಲ್ಲಿ ಇರಲಿಲ್ಲ ಮತ್ತು ಘಟನೆಯ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಸಹ ಅಲ್ಲಿರಲಿಲ್ಲ. ಸಂಜೆ 4.30 ಕ್ಕೆ ಶಾಸಕರ ಮನೆಯಲ್ಲಿ ಮೃತದೇಹ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು, ನಂತರ ತಂಡವು ಸ್ಥಳಕ್ಕೆ ಧಾವಿಸಿತು ಎಂದು ಎಸ್ಪಿ ಮಾಹಿತಿ ನೀಡಿದರು.

ನೀತು ಸಿಂಗ್ ಅವರ ಸೋದರಳಿಯ ಗೋಲು ಸಿಂಗ್ ಅವರಿಗೆ ಸೇರಿದ ಕೋಣೆಯಲ್ಲಿ ಪಿಯೂಷ್ ಸಿಂಗ್ ಅವರ ಶವ ಬಿದ್ದಿತ್ತು. ಪೊಲೀಸರು ಪ್ರಕರಣದ ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಜ್ಞರು ಮತ್ತು ಶ್ವಾನ ದಳವನ್ನು ಸಹಾಯ ಪಡೆದಿದ್ದಾರೆ.

ಮತ್ತಷ್ಟು ಓದಿ: ರೌಡಿಯಂತೆ ಮಚ್ಚಿನಿಂದ ಯುವಕರ ಮೇಲೆ ಹಲ್ಲೆ ನಡೆಸಿದ ASI, FRI ದಾಖಲಾಗುತ್ತಿದ್ದಂತೆ ಎಸ್ಕೇಪ್

ಗೋಲು ಸಿಂಗ್ ಅವರ ಕೊಠಡಿಯಲ್ಲಿ ಶವ ಪತ್ತೆಯಾಗಿದ್ದು, ನೀತು ಸಿಂಗ್ ಅವರ ಸೋದರ ಮಾವ ಸುಮನ್ ಸಿಂಗ್ ಮತ್ತು ಕಾಂಗ್ರೆಸ್ ನ ಮಾಜಿ ಜಿಲ್ಲಾಧ್ಯಕ್ಷ ಅಭಾ ಸಿಂಗ್ ಅವರ ಪುತ್ರ.

ಶನಿವಾರ ಸಂಜೆ 7 ಗಂಟೆಗೆ ಗೋಲು ಸಿಂಗ್ ಮನೆಗೆ ತೆರಳಿದ್ದ ಪಿಯೂಷ್ ಸಿಂಗ್ ಮನೆಗೆ ವಾಪಸ್ ಬಂದಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾತ್ರಿ ಪಿಯೂಷ್ ಸಿಂಗ್ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ನೀತು ಸಿಂಗ್ ಅವರ ಮನೆಯಲ್ಲಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯನ್ನು ಮಾಡಿದಾಗ, ಘಟನೆ ನಡೆದ ನಿಖರವಾದ ಸಮಯ ನಮಗೆ ತಿಳಿಯುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಸಲಾಗುವುದು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ