AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ […]

ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 21, 2020 | 1:19 PM

Share

ಎಐಸಿಸಿ ಪ್ರಧಾನ ಕಚೇರಿಯ ಸಿಬ್ಬಂದಿ ವಸತಿಗೃಹದಲ್ಲಿ ವ್ಯಕ್ತಿಯೊಬ್ಬನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ. ಮೃತನ ಹೆಸರು ಪ್ರಕಾಶ್​ ಸಿಂಗ್​(45) ಎಂದು ತಿಳಿದುಬಂದಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಮೃತ ಪ್ರಕಾಶ್​ನ ಸಹೋದರ ಅವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದನಂತೆ. ಪ್ರಕಾಶ್​ ಶುಕ್ರವಾರದಿಂದ ಸಿಬ್ಬಂದಿ ವಸತಿಗೃಹದ ತನ್ನ ಕೋಣೆಯಲ್ಲಿಯೇ ಉಳಿದಿದ್ದು ಯಾವುದೇ ಕರೆಗೆ ಸ್ಪಂದಿಸುತ್ತಿರಲಿಲ್ಲ ಎಂದು ತಿಳಿಸಿದ್ದ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಪ್ರಕಾಶ್​ ಮೃತದೇಹ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದೆ. ಕೂಡಲೇ ಮೃತದೇಹವನ್ನ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆ ಪ್ರಾಥಮಿಕ ತನಿಖೆ ಪ್ರಕಾರ ಮೃತದೇಹದ ಪಕ್ಕ ಡೆತ್​ನೋಟ್​ ಪತ್ತೆಯಾಗಿದ್ದ ವೈವಾಹಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಕುಡಿತದ ಚಟಕ್ಕೆ ಒಳಗಾಗಿದ್ದ ಪ್ರಕಾಶ್​ನಿಂದ ಆತನ ಕುಟುಂಬ ದೂರವಾಗಿತ್ತಂತೆ. ಹೀಗಾಗಿ, ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪ್ರಕಾಶ್​ ನೇಣಿಗೆ ಶರಣಾಗಿರಬಹುದು ಎಂದು ಹೇಳಲಾಗ್ತಿದೆ.

Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!