AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಚೈನೀಸ್​ ಫುಡ್​ ಸ್ಟಾಲ್​ನ ಗ್ರೈಂಡರ್​ ಯಂತ್ರದಲ್ಲಿ ಸಿಲುಕಿ ಯುವಕ ಸಾವು

ಮುಂಬೈನ ವರ್ಲಿಯಲ್ಲಿರುವ ಚೈನೀಸ್ ಫುಡ್​ ಸ್ಟಾಲ್​ನ ಗ್ರೈಂಡರ್​ನಲ್ಲಿ ಸಿಲುಕಿ ಜಾರ್ಖಂಡ್​ ಮೂಲದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಸೂರಜ್ ನಾರಾಯಣ ಯಾದವ್ ಎಂದು ಗುರುತಿಸಲಾಗಿದೆ, ಯಾದವ್ ಮೂರ್ನಾಲ್ಕು ತಿಂಗಳಿನಿಂದ ಈ ಫುಡ್​ ಸ್ಟಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದರ ಮಾಲೀಕ ಸಚಿನ್ ಕೊಥೇಕರ್. ಗ್ರೈಂಡರ್​ ಯಾದವ್​ರನ್ನು ಎಳೆದುಕೊಂಡಿತ್ತು. ಚೀನೀ ಆಹಾರವನ್ನು ಸಿದ್ಧಪಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಂತ್ರಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸಮರ್ಪಕ ಮಾಹಿತಿಯನ್ನು ನೀಡಿರದ ಕಾರಣ ಈ ಘಟನೆ ನಡೆದಿದೆ. ಸರಿಯಾದ ಸುರಕ್ಷತಾ ಕ್ರಮಗಳ ಕುರಿತು ಕೂಡ ತರಬೇತಿ ನೀಡಿರಲಿಲ್ಲ, ದಾದರ್ ಪೊಲೀಸ್ ಠಾಣೆಯಲ್ಲಿ ಸ್ಟಾಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Mumbai: ಚೈನೀಸ್​ ಫುಡ್​ ಸ್ಟಾಲ್​ನ ಗ್ರೈಂಡರ್​ ಯಂತ್ರದಲ್ಲಿ ಸಿಲುಕಿ ಯುವಕ ಸಾವು
ಪ್ರಾತಿನಿಧಿಕ ಚಿತ್ರImage Credit source: CNBCTV18.COM
ನಯನಾ ರಾಜೀವ್
|

Updated on: Dec 16, 2024 | 10:09 AM

Share

ಮುಂಬೈನ ವರ್ಲಿಯಲ್ಲಿರುವ ಚೈನೀಸ್ ಫುಡ್​ ಸ್ಟಾಲ್​ನ ಗ್ರೈಂಡರ್ ಯಂತ್ರದಲ್ಲಿ ಸಿಲುಕಿ ಜಾರ್ಖಂಡ್​ ಮೂಲದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಸೂರಜ್ ನಾರಾಯಣ ಯಾದವ್ ಎಂದು ಗುರುತಿಸಲಾಗಿದೆ, ಯಾದವ್ ಮೂರ್ನಾಲ್ಕು ತಿಂಗಳಿನಿಂದ ಈ ಫುಡ್​ ಸ್ಟಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದರ ಮಾಲೀಕ ಸಚಿನ್ ಕೊಥೇಕರ್.

ಗ್ರೈಂಡರ್ ಮೊದಲು​ ಯಾದವ್ ಶರ್ಟ್​ ಅನ್ನು ಎಳೆದುಕೊಂಡಿತ್ತು. ಬಳಿಕ ಅವರೇ ಹೋಗಿ ಯಂತ್ರದೊಳಗೆ ಬಿದ್ದಿದ್ದರು. ಚೀನೀ ಆಹಾರವನ್ನು ಸಿದ್ಧಪಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಂತ್ರಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸಮರ್ಪಕ ಮಾಹಿತಿಯನ್ನು ನೀಡಿರದ ಕಾರಣ ಈ ಘಟನೆ ನಡೆದಿದೆ. ಸರಿಯಾದ ಸುರಕ್ಷತಾ ಕ್ರಮಗಳ ಕುರಿತು ಕೂಡ ತರಬೇತಿ ನೀಡಿರಲಿಲ್ಲ, ದಾದರ್ ಪೊಲೀಸ್ ಠಾಣೆಯಲ್ಲಿ ಸ್ಟಾಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಗಸ್ಟ್‌ನಲ್ಲಿ, ಹರಿಯಾಣದ ಗುರುಗ್ರಾಮ್‌ನ ಬಿಲಾಸ್‌ಪುರ್ ಚೌಕ್‌ನಲ್ಲಿ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇ ರಿಪೇರಿ ನೋಡಿಕೊಳ್ಳುತ್ತಿದ್ದ 40 ವರ್ಷದ ವ್ಯಕ್ತಿ ಗ್ರೈಂಡಿಂಗ್ ಯಂತ್ರದಲ್ಲಿ ಸಿಲುಕಿ ಸಾವನ್ನಪ್ಪಿದ್ದರು. ಏತನ್ಮಧ್ಯೆ, ವರ್ಲಿಯಲ್ಲಿರುವ ಪೂನಂ ಚೇಂಬರ್ಸ್ ಕಟ್ಟಡದೊಳಗೆ ಇರುವ ರಾಜಶ್ರೀ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರೊಡಕ್ಷನ್ ಸ್ಟುಡಿಯೋದ ಎರಡನೇ ಮಹಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿತ್ತು.

ಮತ್ತಷ್ಟು ಓದಿ: ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಎಂಟು ಅಗ್ನಿಶಾಮಕ ಇಂಜಿನ್‌ಗಳು ಮತ್ತು ಆರು ಜಂಬೋ ಟ್ಯಾಂಕರ್‌ಗಳನ್ನು ರವಾನಿಸಲಾಗಿತ್ತು. ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಎಡಿಟಿಂಗ್ ಪ್ಯಾನಲ್‌ಗಳು, ಕಂಪ್ಯೂಟರ್‌ಗಳು, ಕ್ಯಾಮೆರಾಗಳು ಮತ್ತು ಸ್ಟುಡಿಯೋದ ಉಪಕರಣಗಳು ಬೆಂಕಿಗೀಡಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್