AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಚೈನೀಸ್​ ಫುಡ್​ ಸ್ಟಾಲ್​ನ ಗ್ರೈಂಡರ್​ ಯಂತ್ರದಲ್ಲಿ ಸಿಲುಕಿ ಯುವಕ ಸಾವು

ಮುಂಬೈನ ವರ್ಲಿಯಲ್ಲಿರುವ ಚೈನೀಸ್ ಫುಡ್​ ಸ್ಟಾಲ್​ನ ಗ್ರೈಂಡರ್​ನಲ್ಲಿ ಸಿಲುಕಿ ಜಾರ್ಖಂಡ್​ ಮೂಲದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಸೂರಜ್ ನಾರಾಯಣ ಯಾದವ್ ಎಂದು ಗುರುತಿಸಲಾಗಿದೆ, ಯಾದವ್ ಮೂರ್ನಾಲ್ಕು ತಿಂಗಳಿನಿಂದ ಈ ಫುಡ್​ ಸ್ಟಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದರ ಮಾಲೀಕ ಸಚಿನ್ ಕೊಥೇಕರ್. ಗ್ರೈಂಡರ್​ ಯಾದವ್​ರನ್ನು ಎಳೆದುಕೊಂಡಿತ್ತು. ಚೀನೀ ಆಹಾರವನ್ನು ಸಿದ್ಧಪಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಂತ್ರಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸಮರ್ಪಕ ಮಾಹಿತಿಯನ್ನು ನೀಡಿರದ ಕಾರಣ ಈ ಘಟನೆ ನಡೆದಿದೆ. ಸರಿಯಾದ ಸುರಕ್ಷತಾ ಕ್ರಮಗಳ ಕುರಿತು ಕೂಡ ತರಬೇತಿ ನೀಡಿರಲಿಲ್ಲ, ದಾದರ್ ಪೊಲೀಸ್ ಠಾಣೆಯಲ್ಲಿ ಸ್ಟಾಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Mumbai: ಚೈನೀಸ್​ ಫುಡ್​ ಸ್ಟಾಲ್​ನ ಗ್ರೈಂಡರ್​ ಯಂತ್ರದಲ್ಲಿ ಸಿಲುಕಿ ಯುವಕ ಸಾವು
ಪ್ರಾತಿನಿಧಿಕ ಚಿತ್ರImage Credit source: CNBCTV18.COM
ನಯನಾ ರಾಜೀವ್
|

Updated on: Dec 16, 2024 | 10:09 AM

Share

ಮುಂಬೈನ ವರ್ಲಿಯಲ್ಲಿರುವ ಚೈನೀಸ್ ಫುಡ್​ ಸ್ಟಾಲ್​ನ ಗ್ರೈಂಡರ್ ಯಂತ್ರದಲ್ಲಿ ಸಿಲುಕಿ ಜಾರ್ಖಂಡ್​ ಮೂಲದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಸೂರಜ್ ನಾರಾಯಣ ಯಾದವ್ ಎಂದು ಗುರುತಿಸಲಾಗಿದೆ, ಯಾದವ್ ಮೂರ್ನಾಲ್ಕು ತಿಂಗಳಿನಿಂದ ಈ ಫುಡ್​ ಸ್ಟಾಲ್​ನಲ್ಲಿ ಕೆಲಸ ಮಾಡುತ್ತಿದ್ದ. ಇದರ ಮಾಲೀಕ ಸಚಿನ್ ಕೊಥೇಕರ್.

ಗ್ರೈಂಡರ್ ಮೊದಲು​ ಯಾದವ್ ಶರ್ಟ್​ ಅನ್ನು ಎಳೆದುಕೊಂಡಿತ್ತು. ಬಳಿಕ ಅವರೇ ಹೋಗಿ ಯಂತ್ರದೊಳಗೆ ಬಿದ್ದಿದ್ದರು. ಚೀನೀ ಆಹಾರವನ್ನು ಸಿದ್ಧಪಡಿಸುತ್ತಿದ್ದಾಗ ಈ ಘಟನೆ ನಡೆದಿದೆ. ಯಂತ್ರಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಸಮರ್ಪಕ ಮಾಹಿತಿಯನ್ನು ನೀಡಿರದ ಕಾರಣ ಈ ಘಟನೆ ನಡೆದಿದೆ. ಸರಿಯಾದ ಸುರಕ್ಷತಾ ಕ್ರಮಗಳ ಕುರಿತು ಕೂಡ ತರಬೇತಿ ನೀಡಿರಲಿಲ್ಲ, ದಾದರ್ ಪೊಲೀಸ್ ಠಾಣೆಯಲ್ಲಿ ಸ್ಟಾಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಗಸ್ಟ್‌ನಲ್ಲಿ, ಹರಿಯಾಣದ ಗುರುಗ್ರಾಮ್‌ನ ಬಿಲಾಸ್‌ಪುರ್ ಚೌಕ್‌ನಲ್ಲಿ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇ ರಿಪೇರಿ ನೋಡಿಕೊಳ್ಳುತ್ತಿದ್ದ 40 ವರ್ಷದ ವ್ಯಕ್ತಿ ಗ್ರೈಂಡಿಂಗ್ ಯಂತ್ರದಲ್ಲಿ ಸಿಲುಕಿ ಸಾವನ್ನಪ್ಪಿದ್ದರು. ಏತನ್ಮಧ್ಯೆ, ವರ್ಲಿಯಲ್ಲಿರುವ ಪೂನಂ ಚೇಂಬರ್ಸ್ ಕಟ್ಟಡದೊಳಗೆ ಇರುವ ರಾಜಶ್ರೀ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಪ್ರೊಡಕ್ಷನ್ ಸ್ಟುಡಿಯೋದ ಎರಡನೇ ಮಹಡಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿತ್ತು.

ಮತ್ತಷ್ಟು ಓದಿ: ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ

ಎಂಟು ಅಗ್ನಿಶಾಮಕ ಇಂಜಿನ್‌ಗಳು ಮತ್ತು ಆರು ಜಂಬೋ ಟ್ಯಾಂಕರ್‌ಗಳನ್ನು ರವಾನಿಸಲಾಗಿತ್ತು. ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಶಾರ್ಟ್​ ಸರ್ಕ್ಯೂಟ್​ನಿಂದ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಎಡಿಟಿಂಗ್ ಪ್ಯಾನಲ್‌ಗಳು, ಕಂಪ್ಯೂಟರ್‌ಗಳು, ಕ್ಯಾಮೆರಾಗಳು ಮತ್ತು ಸ್ಟುಡಿಯೋದ ಉಪಕರಣಗಳು ಬೆಂಕಿಗೀಡಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!