AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಹಾವಿಗೆ ಮುತ್ತು ಕೊಡಲು ಹೋಗಿ ಯುವಕ ಸಾವು

ಕುಡಿದ ಮತ್ತಿನಲ್ಲಿ ಹಾವಿಗೆ ಮುತ್ತು ಕೊಡಲು ಹೋಗಿ ಯುವಕನೊಬ್ಬರ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಹಾವಿನ ಜತೆ ಚಿತ್ರೀಕರಣ ಮಾಡುವಾಗ ಹಾವು ಕಚ್ಚಿದೆ, ಅಹಿರೌಲಿ ಗ್ರಾಮದ ರೋಹಿತ್ ಜೈಸ್ವಾಲ್ ಎಂಬ ಯುವಕ ಮದ್ಯದ ಅಮಲಿನಲ್ಲಿ ಹಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಕುಡಿದ ಮತ್ತಿನಲ್ಲಿ ಹಾವಿಗೆ ಮುತ್ತು ಕೊಡಲು ಹೋಗಿ ಯುವಕ ಸಾವು
ಹಾವುImage Credit source: India Today
ನಯನಾ ರಾಜೀವ್
|

Updated on: Nov 06, 2023 | 12:46 PM

Share

ಕುಡಿದ ಮತ್ತಿನಲ್ಲಿ ಹಾವಿಗೆ ಮುತ್ತು ಕೊಡಲು ಹೋಗಿ ಯುವಕನೊಬ್ಬರ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ. ಹಾವಿನ ಜತೆ ಚಿತ್ರೀಕರಣ ಮಾಡುವಾಗ ಹಾವು ಕಚ್ಚಿದೆ, ಅಹಿರೌಲಿ ಗ್ರಾಮದ ರೋಹಿತ್ ಜೈಸ್ವಾಲ್ ಎಂಬ ಯುವಕ ಮದ್ಯದ ಅಮಲಿನಲ್ಲಿ ಹಾವಿನೊಂದಿಗೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು.

ವೀಡಿಯೋದಲ್ಲಿ, ಜೈಸ್ವಾಲ್ ಶಿವನ ರೂಪವಾದ ಮಹಾಕಾಲ್ ಆಗಿ ನಟಿಸುತ್ತಿರುವುದನ್ನು ಕಾಣಬಹುದು. ಹಾವಿಗೆ ತನ್ನನ್ನು ಕಚ್ಚುವಂತೆ ಸವಾಲು ಹಾಕುತ್ತಿದ್ದ, ಹಾವನ್ನು ಕುತ್ತಿಗೆ ಹಾಗೂ ಕೈಗೆ ಸುತ್ತಿಕೊಂಡಿದ್ದಾನೆ, ಬಳಿಕ ನಾಲಿಕೆ ತೆರೆದು ನಾಲಿಗೆಗೆ ಕಚ್ಚುವಂತೆ ಹಾವಿಗೆ ಹೇಳಿದ್ದಾನೆ. ಸಿಗರೇಟ್​ ಸೇದುವುದು ಹಾಗೂ ಹಾವಿಗೆ ಹೊಡೆಯುವುದು ಹೀಗೆ ಮಾನಸಿಕ ಅಸ್ವಸ್ಥನಂತೆ ಆಡಿದ್ದಾನೆ.

ಕ್ರೈಟ್​ ಎಂಬ ಹಾವು ಜೈಸ್ವಾಲ್​ಗೆ ಕಚ್ಚಿದೆ, ಕೂಡಲೇ ಆತ ಮೃತಪಟ್ಟಿದ್ದಾನೆ. 4 ನಿಮಿಷ 38 ಸೆಕೆಂಡುಗಳ ಅವಧಿಯ ಈ ವಿಡಿಯೋವನ್ನು ಜೈಸ್ವಾಲ್ ಚಿತ್ರೀಕರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಮತ್ತಷ್ಟು ಓದಿ: ನೋಯ್ಡಾದಲ್ಲಿ ರೇವ್ ಪಾರ್ಟಿಗಳಿಗಾಗಿ ಹಾವಿನ ವಿಷ: ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಕೇಸ್

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾವು ಕಡಿತದಿಂದ ಸಾವು ಸಂಭವಿಸಿದೆ ಎಂಬ ಮಾಹಿತಿ ಮೇರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖುಖುಂಡು ಪೊಲೀಸ್ ಠಾಣೆಯ ಪ್ರಭಾರಿ ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಆರು ಮಂದಿ ಒಡಹುಟ್ಟಿದವರಲ್ಲಿ ಕಿರಿಯವನಾದ ಜೈಸ್ವಾಲ್ ಅವಿವಾಹಿತನಾಗಿದ್ದ. ಅವರ ಪೋಷಕರು ಸಿಲಿಗುರಿಯಲ್ಲಿ ವಾಸಿಸುತ್ತಿದ್ದರೆ, ಅವರ ಇತರ ಸಹೋದರರು ಗ್ರಾಮದ ಹೊರಗೆ ಕೆಲಸ ಮಾಡುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!