AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ. ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ […]

ಕೊರೊನಾ ಕಾಲದಲ್ಲೂ ಡಬಲ್​ ಸಂಬಳ: ಇದು ಹೇಗೆ ಸಾಧ್ಯ?
KUSHAL V
| Edited By: ಸಾಧು ಶ್ರೀನಾಥ್​|

Updated on:Oct 19, 2020 | 4:29 PM

Share

ಲಕ್ನೋ: ಕೊರೊನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಬೀದಿಗೆ ಬಂದವರ ಸಂಖ್ಯೆಯೇ ಹೆಚ್ಚು. ಅಂಥದ್ರಲ್ಲಿ, ಒಂದೇ ಕಂಪನಿಯಿಂದ ಸತತ ಒಂದು ವರ್ಷದ ಕಾಲ ಡಬಲ್ ಸಂಬಳ ಪಡೆದ ಐನಾತಿ ನೌಕರನನ್ನು ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಅರೇ ಇದು ಹೇಗೆ ಸಾಧ್ಯ ಅಂತೀರಾ? ಇಲ್ಲಿದೆ ನೋಡಿ.

ಅಂದ ಹಾಗೆ, 25 ವರ್ಷದ ಆರೋಪಿ ಈ ಹಿಂದೆ ಗುತ್ತಿಗೆದಾರನೊಬ್ಬನ ಮುಖಾಂತರ ಎರಡು ವರ್ಷಗಳ ಹಿಂದೆ ಗ್ರೇಟರ್​ ನೋಯ್ಡಾದ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದನಂತೆ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬ ಗುತ್ತಿಗೆದಾರನ ಮೂಲಕ ಅದೇ ಕಂಪನಿಗೆ ನೌಕರಿಗೆ ಸೇರಿರುವ ಹಾಗೆ ಬಿಂಬಿಸಿದ್ದಾನೆ.

ಇದೇ ಐಡಿಯಾ ಬಳಸಿ ಆತ ಒಂದು ವರ್ಷದಿಂದ ಡಬಲ್​ ಸಂಬಳ ಪಡೆದು ಮಜಾ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಚ್ಚರಿಯ ಸಂಗತಿಯೆಂದರೆ, ಆತ ತನ್ನ ಎರಡೂ ಹುದ್ದೆಗಳಿಗೆ ಬಯೋಮೆಟ್ರಿಕ್​ ಹಾಜರಾತಿ ಸಹ ನೀಡುತ್ತಿದ್ದ ಎಂದು ಕಂಪನಿಯ HR ವಿಭಾಗವು ಮಾಹಿತಿ ನೀಡಿದೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಕಂಪನಿಯು ಪೊಲೀಸರಿಗೆ ದೂರು ನೀಡಿದೆ. ಕಂಪನಿ ನೀಡಿದ ದೂರಿನನ್ವಯ ನೌಕರನನ್ನು ಬಂಧಿಸಿದ್ದಾರೆ.

Published On - 4:15 pm, Mon, 19 October 20

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ