AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಇಂಪ್ರೆಸ್​ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಕಷ್ಟಕ್ಕೆ ಸಿಲುಕಿದ ಪತಿ

ಪತ್ನಿಯನ್ನು ಇಂಪ್ರೆಸ್ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಪತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಪೊಲೀಸರ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್​ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪತ್ನಿಯನ್ನು ಇಂಪ್ರೆಸ್​ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಕಷ್ಟಕ್ಕೆ ಸಿಲುಕಿದ ಪತಿ
ಸೈಬರ್ ಕ್ರೈಂ
ನಯನಾ ರಾಜೀವ್
|

Updated on: Feb 17, 2023 | 9:25 AM

Share

ಪತ್ನಿಯನ್ನು ಇಂಪ್ರೆಸ್ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಪತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಪೊಲೀಸರ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್​ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್ ಆಗಿರುವ ಆತ ಪಾಸ್​ಪೋರ್ಟ್​ ಪರಿಶೀಲನೆ ವೇಳೆ ಸಿಕ್ಕಿಹಾಕಿಕೊಳ್ಳುವುದನ್ನು ತಪ್ಪಿಸಲು ತನ್ನ ಪತ್ನಿ ಸೇರಿದಂತೆ ಮೂವರು ಅರ್ಜಿದಾರರ ಪಾಸ್​ಪೋರ್ಟ್​ ವಿಚಾರಣೆಯನ್ನು ತೆರವುಗೊಳಿಸಿದ್ದಾರೆ.

ಆತನನ್ನು ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಬಂಧಿಸಲಾಗಿದ್ದು, ಆರೋಪಿ ರಾಜಾ ಬಾಬು ಷಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವರದಿ ಪ್ರಕಾರ, ಉದ್ಯೋಗಕ್ಕಾಗಿ ವಿದೇಶಕ್ಕೆ ಪ್ರಯಾಣಿಸಲು ಬಯಸಿದ್ದ ಪತ್ನಿಯನ್ನು ಮೆಚ್ಚಿಸಲು ಆರೋಪಿ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದ.

ಆರೋಪಿಯ ಪತ್ನಿಯ ದಾಖಲೆಗಳು ಸರಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ, ಆಕೆಯ ಪಾಸ್​ಪೋರ್ಟ್​ ಅನ್ನು ಸದ್ಯ ತಡೆಹಿಡಿಯಲಾಗಿದೆ. ರಾಜಾ ಬಾಬು ಷಾ ಉತ್ತರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪತ್ನಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಯೋಜಿಸಿದ್ದ,ಇದಕ್ಕಾಗಿ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರ ನಡುವೆ ತನ್ನ ಪತ್ನಿಯನ್ನು ಮೆಚ್ಚಿಸುವ ನಿಟ್ಟಿನಲ್ಲಿ ಪಾಸ್​ಪೋರ್ಟ್​ ವ್ಯವಸ್ಥೆಯನ್ನೇ ಆತ ಹ್ಯಾಕ್ ಮಾಡಿದ್ದ.

ಮೂರು ಪಾಸ್​ಪೋರ್ಟ್​ ಅರ್ಜಿಗಳು ಕ್ಲಿಯರೆನ್ಸ್​ಗಾಗಿ ಬಾಕಿ ಉಳಿದಿದ್ದವು. ಪಾಸ್​ಪೋರ್ಟ್​ ಫೈಲ್​ಗಳನ್ನು ಪ್ರಾದೇಶಿಕ ಪಾಸ್​ಪೋರ್ಟ್​ ಕಚೇರಿಯಿಂದ ನಗರ ಪೊಲೀಸ್ ಇಲಾಖೆಯ ವಿಶೇಷ ಶಾಖೆಗೆ ಕಳುಹಿಸಬೇಕಿತ್ತು. ವಿಶೇಷ ಶಾಖೆ ನಂತರ ಸ್ಥಳೀಯ ಪೊಲೀಸರಿಗೆ ಅರ್ಜಿದಾರರ ಕುರಿತು ವರದಿಯನ್ನು ಸಲ್ಲಿಸುವಂತೆ ಕೇಳಬೇಕಾಗಿತ್ತು.

ಬಳಿಕ ಅದರ ಆಧಾರದ ಮೇಲೆ ಪಾಸ್​ಪೋರ್ಟ್​ ಮಂಜೂರು ಮಾಡುವ ನಿರ್ಧಾರ ತೆಗೆದುಕೊಳ್ಲಬೇಕಿತ್ತು, ಜತೆಗೆ ಮುಂದಿನ ಕ್ರಮಕ್ಕಾಗಿ ಪಾಸ್​ಪೋರ್ಟ್​ ಕಚೇರಿಗೆ ರವಾನಿಸಬೇಕಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ