AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಇಂಪ್ರೆಸ್​ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಕಷ್ಟಕ್ಕೆ ಸಿಲುಕಿದ ಪತಿ

ಪತ್ನಿಯನ್ನು ಇಂಪ್ರೆಸ್ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಪತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಪೊಲೀಸರ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್​ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪತ್ನಿಯನ್ನು ಇಂಪ್ರೆಸ್​ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಕಷ್ಟಕ್ಕೆ ಸಿಲುಕಿದ ಪತಿ
ಸೈಬರ್ ಕ್ರೈಂ
ನಯನಾ ರಾಜೀವ್
|

Updated on: Feb 17, 2023 | 9:25 AM

Share

ಪತ್ನಿಯನ್ನು ಇಂಪ್ರೆಸ್ ಮಾಡಲು ಪಾಸ್​ಪೋರ್ಟ್​ ಸಿಸ್ಟಂ ಹ್ಯಾಕ್​ ಮಾಡಿ ಪತಿಯೊಬ್ಬ ಸಂಕಷ್ಟಕ್ಕೆ ಸಿಲುಕಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಪೊಲೀಸರ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್​ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ವೃತ್ತಿಯಲ್ಲಿ ಸಿವಿಲ್ ಎಂಜಿನಿಯರ್ ಆಗಿರುವ ಆತ ಪಾಸ್​ಪೋರ್ಟ್​ ಪರಿಶೀಲನೆ ವೇಳೆ ಸಿಕ್ಕಿಹಾಕಿಕೊಳ್ಳುವುದನ್ನು ತಪ್ಪಿಸಲು ತನ್ನ ಪತ್ನಿ ಸೇರಿದಂತೆ ಮೂವರು ಅರ್ಜಿದಾರರ ಪಾಸ್​ಪೋರ್ಟ್​ ವಿಚಾರಣೆಯನ್ನು ತೆರವುಗೊಳಿಸಿದ್ದಾರೆ.

ಆತನನ್ನು ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಬಂಧಿಸಲಾಗಿದ್ದು, ಆರೋಪಿ ರಾಜಾ ಬಾಬು ಷಾನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವರದಿ ಪ್ರಕಾರ, ಉದ್ಯೋಗಕ್ಕಾಗಿ ವಿದೇಶಕ್ಕೆ ಪ್ರಯಾಣಿಸಲು ಬಯಸಿದ್ದ ಪತ್ನಿಯನ್ನು ಮೆಚ್ಚಿಸಲು ಆರೋಪಿ ಪಾಸ್​ಪೋರ್ಟ್​ ಪರಿಶೀಲನಾ ವ್ಯವಸ್ಥೆಯನ್ನು ಹ್ಯಾಕ್ ಮಾಡಲು ಯತ್ನಿಸಿದ್ದ.

ಆರೋಪಿಯ ಪತ್ನಿಯ ದಾಖಲೆಗಳು ಸರಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ, ಆಕೆಯ ಪಾಸ್​ಪೋರ್ಟ್​ ಅನ್ನು ಸದ್ಯ ತಡೆಹಿಡಿಯಲಾಗಿದೆ. ರಾಜಾ ಬಾಬು ಷಾ ಉತ್ತರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪತ್ನಿ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾರೆ.

ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಯೋಜಿಸಿದ್ದ,ಇದಕ್ಕಾಗಿ ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದರ ನಡುವೆ ತನ್ನ ಪತ್ನಿಯನ್ನು ಮೆಚ್ಚಿಸುವ ನಿಟ್ಟಿನಲ್ಲಿ ಪಾಸ್​ಪೋರ್ಟ್​ ವ್ಯವಸ್ಥೆಯನ್ನೇ ಆತ ಹ್ಯಾಕ್ ಮಾಡಿದ್ದ.

ಮೂರು ಪಾಸ್​ಪೋರ್ಟ್​ ಅರ್ಜಿಗಳು ಕ್ಲಿಯರೆನ್ಸ್​ಗಾಗಿ ಬಾಕಿ ಉಳಿದಿದ್ದವು. ಪಾಸ್​ಪೋರ್ಟ್​ ಫೈಲ್​ಗಳನ್ನು ಪ್ರಾದೇಶಿಕ ಪಾಸ್​ಪೋರ್ಟ್​ ಕಚೇರಿಯಿಂದ ನಗರ ಪೊಲೀಸ್ ಇಲಾಖೆಯ ವಿಶೇಷ ಶಾಖೆಗೆ ಕಳುಹಿಸಬೇಕಿತ್ತು. ವಿಶೇಷ ಶಾಖೆ ನಂತರ ಸ್ಥಳೀಯ ಪೊಲೀಸರಿಗೆ ಅರ್ಜಿದಾರರ ಕುರಿತು ವರದಿಯನ್ನು ಸಲ್ಲಿಸುವಂತೆ ಕೇಳಬೇಕಾಗಿತ್ತು.

ಬಳಿಕ ಅದರ ಆಧಾರದ ಮೇಲೆ ಪಾಸ್​ಪೋರ್ಟ್​ ಮಂಜೂರು ಮಾಡುವ ನಿರ್ಧಾರ ತೆಗೆದುಕೊಳ್ಲಬೇಕಿತ್ತು, ಜತೆಗೆ ಮುಂದಿನ ಕ್ರಮಕ್ಕಾಗಿ ಪಾಸ್​ಪೋರ್ಟ್​ ಕಚೇರಿಗೆ ರವಾನಿಸಬೇಕಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು