AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುವನಂತಪುರದಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ದೋಷಿ ಎಂದು ತೀರ್ಪು

ತಿರುವನಂತಪುರದಲ್ಲಿ ವಲಸೆ ಬಂದ ದಂಪತಿಯ ಎರಡು ವರ್ಷದ ಮಗಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ವ್ಯಕ್ತಿಗೆ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಚಕ್ಕಾದಲ್ಲಿ ಅಲೆಮಾರಿ ದಂಪತಿಗಳ ಮಗಳಾದ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 46 ವರ್ಷದ ವ್ಯಕ್ತಿಯನ್ನು ನ್ಯಾಯಾಲಯ ಇಂದು ದೋಷಿ ಎಂದು ತೀರ್ಪು ನೀಡಿದೆ.

ತಿರುವನಂತಪುರದಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ದೋಷಿ ಎಂದು ತೀರ್ಪು
Child Abuse
ಸುಷ್ಮಾ ಚಕ್ರೆ
|

Updated on: Sep 27, 2025 | 4:38 PM

Share

ತಿರುವನಂತಪುರಂ, ಸೆಪ್ಟೆಂಬರ್ 27: ಅಲೆಮಾರಿ ದಂಪತಿಯ 2 ವರ್ಷದ ಮಗಳನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಆರೋಪದಲ್ಲಿ ಕಬೀರ್ ಅಲಿಯಾಸ್ ಹಸನ್ ಕುಟ್ಟಿ ಎಂಬ 45 ವರ್ಷದ ಆರೋಪಿಯನ್ನು ತಪ್ಪಿತಸ್ಥ ಎಂದು ತಿರುವನಂತಪುರಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಲಯವು (POCSO Court) ತೀರ್ಪು ನೀಡಿದೆ. ಅಕ್ಟೋಬರ್ 3ರಂದು ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸಲಿದೆ. ಹಸನ್ ಕುಟ್ಟಿ ಈ ಹಿಂದೆಯೂ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿದ್ದ.

2024ರ ಫೆಬ್ರವರಿ 19ರಂದು ಆತನ ಮೇಲೆ ಪೋಕ್ಸೊ ಕೇಸ್ ದಾಖಲಾಗಿತ್ತು. ಆತ ಇದೀಗ ಅಪರಾಧಿಯೆಂದು ತೀರ್ಪು ಹೊರಬಿದ್ದಿದೆ. ಕಳೆದ ವರ್ಷ ಹೈದರಾಬಾದ್‌ನಿಂದ ಜೇನುತುಪ್ಪ ಮಾರಾಟ ಮಾಡಲು ಕೇರಳಕ್ಕೆ ಬಂದಿದ್ದ ತನ್ನ ಹೆತ್ತವರೊಂದಿಗೆ ಚಕ್ಕೈ ಬಳಿ ರಸ್ತೆಬದಿಯಲ್ಲಿ ಮಲಗಿದ್ದ ಬಾಲಕಿಯನ್ನು ಹಸನ್ ಕುಟ್ಟಿ ಆಕೆಯನ್ನು ಅಪಹರಿಸಿದ್ದ. ಬಳಿಕ ಆಕೆಯನ್ನು ಬ್ರಹ್ಮೋಸ್ ಏರೋಸ್ಪೇಸ್‌ನ ಹಿಂದಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದ. ಆಕೆ ಮೃತಪಟ್ಟಿದ್ದಾಳೆಂದು ನಂಬಿ ಆಕೆಯನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದ.

ಇದನ್ನೂ ಓದಿ: ಬೆಂಗಳೂರು: ಹಾಡಹಗಲೇ ಲೇಡಿಸ್ ಪಿಜಿಗೆ ನುಗ್ಗಿದ ಖದೀಮ; ಚಾಕು ತೋರಿಸಿ ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ

ಆ ಮಗು ಕಾಣೆಯಾದ ನಂತರ, ಆಕೆಯ ಪೋಷಕರು ದೂರು ದಾಖಲಿಸಿದ್ದರು. ಮರುದಿನ ಸಂಜೆ 7.30ರ ಸುಮಾರಿಗೆ ಬ್ರಹ್ಮೋಸ್ ಕಾಂಪೌಂಡ್ ಗೋಡೆಯ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು ಪತ್ತೆಯಾಗಿತ್ತು. ಆಕೆಯನ್ನು ತಕ್ಷಣ SAT ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಆಕೆಯ ಜೀವವನ್ನು ಉಳಿಸಲಾಯಿತು.

ಮಗುವಿನೊಂದಿಗೆ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಗಳಿಂದ ಈ ಪ್ರಕರಣದ ಸುಳಿವು ಸಿಕ್ಕಿತ್ತು. ಆರೋಪಿಯನ್ನು ಗುರುತಿಸುವ ಮೊದಲು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಈ ಘಟನೆಯ ನಂತರ 13ನೇ ದಿನದಂದು ಕೊಲ್ಲಂನಿಂದ ಹಸನ್ ಕುಟ್ಟಿಯನ್ನು ಬಂಧಿಸಲಾಯಿತು.

ಇದನ್ನೂ ಓದಿ: ಬೆಂಗಳೂರಿನ ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ; ಹಲ್ಲೆ ಮಾಡಿ ದುಡ್ಡಿನೊಂದಿಗೆ ಆರೋಪಿ ಪರಾರಿ

ಆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಆರೋಪಿಯ ಬಟ್ಟೆಯ ಮೇಲೆ ಕಂಡುಬಂದ ಕೂದಲಿನ ಮಾದರಿಗಳು ವಿಧಿವಿಜ್ಞಾನ ಪರೀಕ್ಷೆಯ ಸಮಯದಲ್ಲಿ ಆ ಮಗುವಿನ ಕೂದಲಿನ ಮಾದರಿಗಳಿಗೆ ಹೊಂದಿಕೆಯಾಯಿತು. ಅಪರಾಧದ ಸ್ಥಳದಿಂದ ಮತ್ತು ಆರೋಪಿಯ ಬಟ್ಟೆಗಳಿಂದ ಸಂಗ್ರಹಿಸಲಾದ ಮಾದರಿಗಳು ಸಹ ಹೊಂದಾಣಿಕೆಯಾಗುತ್ತವೆ ಎಂದು ಕಂಡುಬಂದಿತು. ನಂತರ ಪೊಲೀಸರು ಮಗುವನ್ನು ಮಕ್ಕಳ ಕಲ್ಯಾಣ ಸಮಿತಿ ನಡೆಸುತ್ತಿರುವ ಆಶ್ರಯಕ್ಕೆ ಸ್ಥಳಾಂತರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!