Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕೊಲ್ಲಲು ಹಾವಾಡಿಗರಿಗೆ ಸುಪಾರಿ ಕೊಟ್ಟ ಕಾನ್​ಸ್ಟೆಬಲ್, ಹಾವು ಕಚ್ಚಿದ್ರೂ ಬದುಕುಳಿದ ಮಹಿಳೆ

ಪತ್ನಿಯನ್ನು ತನ್ನ ಜೀವನದಿಂದ ದೂರಮಾಡಬೇಕೆಂದು ಕಾನ್​ಸ್ಟೆಬಲ್ ಪ್ಲ್ಯಾನ್​ ಮಾಡಿದ್ದ, ಆದರೆ ವಿಧಿಯಾಟವೇ ಬೇರೆ ಇತ್ತು. ಹಾಆಡಿಗರನ್ನು ಕರೆಸಿ ಆಕೆಗೆ ಹಾವು ಕಚ್ಚಿಸಿದರೂ ಪವಾಡವೆಮಬಂತೆ ಬದುಕುಳಿದಿದ್ದಾಳೆ. ಅಂಶಿಕಾ ಎಂಬ ಮಹಿಳೆ ದೂರು ನೀಡಿದ್ದು, ನಾಲ್ಕು ವರ್ಷಗಳ ಹಿಂದೆ ಕಾನ್​ಸ್ಟೆಬಲ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ, ಆಗ ಅನಿವಾರ್ಯವಾಗಿ ಆಕೆಯನ್ನು ಮದುವೆಯಾಗಬೇಕಾಯಿತು ಇದು ಒತ್ತಡದ ಸಂಬಂಧವಾಗಿತ್ತು ಎಂಬುದನ್ನು ತಿಳಿಸಿದ್ದಾಳೆ.

ಪತ್ನಿ ಕೊಲ್ಲಲು ಹಾವಾಡಿಗರಿಗೆ ಸುಪಾರಿ ಕೊಟ್ಟ ಕಾನ್​ಸ್ಟೆಬಲ್, ಹಾವು ಕಚ್ಚಿದ್ರೂ ಬದುಕುಳಿದ ಮಹಿಳೆ
ಕಾನ್​ಸ್ಟೆಬಲ್ Image Credit source: India Today
Follow us
ನಯನಾ ರಾಜೀವ್
|

Updated on: Mar 25, 2025 | 7:53 AM

ಕಾನ್ಪುರ, ಮಾರ್ಚ್​ 25: ಪತಿ-ಪತ್ನಿ ನಡುವಿನ ಸಂಬಂಧ ಹಳಸಿತ್ತು, ಇಬ್ಬರೂ ದೂರವಾಗುವ ಬದಲು ಆಕೆಯನ್ನು ಹತ್ಯೆ ಮಾಡಲು ಕಾನ್​ಸ್ಟೆಬಲ್​ ಆಲೋಚಿಸಿದ್ದ. ಹಾಗಾಗಿ ಬೇರೆ ರೀತಿ ಕೊಲೆ ಮಾಡಿದರೆ ಅನುಮಾನ ಬರಬಹುದೆಂದು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಬೇಕೆಂದುಕೊಂಡಿದ್ದ, ಆತನ ಆಲೋಚನೆ ಪ್ರಕಾರ ಹಾವು ಕೂಡ ಕಚ್ಚಿದೆ, ಆದರೂ ಆಕೆ ಬದುಕುಳಿದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಅಂಶಿಕಾ ಎಂಬ ಮಹಿಳೆ ದೂರು ನೀಡಿದ್ದು, ನಾಲ್ಕು ವರ್ಷಗಳ ಹಿಂದೆ ಕಾನ್​ಸ್ಟೆಬಲ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ, ಆಗ ಅನಿವಾರ್ಯವಾಗಿ ಆಕೆಯನ್ನು ಮದುವೆಯಾಗಬೇಕಾಯಿತು ಇದು ಒತ್ತಡದ ಸಂಬಂಧವಾಗಿತ್ತು ಎಂಬುದನ್ನು ತಿಳಿಸಿದ್ದಾಳೆ.

ಕಾನೂನಿಂದ ತಪ್ಪಿಸಿಕೊಳ್ಳಲು ಆತ ದೇವಸ್ಥಾನಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಮದುವೆಯಾಗಿದ್ದ, ಆರಂಭದಲ್ಲಿ ತನ್ನ ಸಹೋದರಿ ಮನೆಯಲ್ಲಿ ಆಕೆಯನ್ನು ಇರಿಸಿದ್ದ. ಬಳಿಕ ಆತ ಉತ್ತರ ಪ್ರದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ಆರಂಭಿಸಿದ ಬಳಿಕ ಆಕೆಯನ್ನು ಪತ್ನಿ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ್ದ.

ಮತ್ತಷ್ಟು ಓದಿ:ಅಕ್ರಮ ಸಂಬಂಧ ಮುಚ್ಚಿಟ್ಟುಕೊಳ್ಳಲು ಹುಟ್ಟಿದ ಕೂಸು ತಿಪ್ಪೆಗೆ: ಇಬ್ಬರು ಅರೆಸ್ಟ್​

ಈ ಕುರಿತು ಅಂಶಿಕಾ ದೂರು ನೀಡಿದ ಬಳಿಕ ಆತ ಆಕೆಯನ್ನು ಒಪ್ಪಿಕೊಂಡಿದ್ದ, ತನ್ನ ಮನೆಗೂ ಕರೆದುಕೊಂಡು ಹೋಗಿದ್ದ, ಅದಾದ ಬಳಿಕ ದೈಹಿಕ ಕಿರುಕುಳ, ಬೆದರಿಕೆಗಳು ಆರಂಭವಾಗಿದ್ದವು. ಫೆಬ್ರವರಿ 19ರಂದು ಅನುಜ್ ಇಬ್ಬರು ಹಾವಾಡಿಗರನ್ನು ನೇಮಿಸಿ ಆಕೆಗೆ ಹಾವು ಕಚ್ಚಿಸಿದ್ದಾನೆ. ಬಳಿಕ ಆಕೆ ಪ್ರಜ್ಞೆ ತಪ್ಪಿದ್ದಾಳೆ, ಸತ್ತಿದ್ದಾಳೆಮುದ ತಿಳಿದು ಅಲ್ಲಿಂದ ಹೋಗಿದ್ದಾನೆ.

ಅಂಶಿಕಾಗೆ ಪ್ರಜ್ಞೆ ಬಂದು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು, ಕೋಣೆಯನ್ನು ಹೊರಗಿನಿಂದ ಲಾಕ್ ಮಾಡಿ ತನ್ನ ಹೆತ್ತವರ ಮನೆಗೆ ಓಡಿಹೋಗಿದ್ದಳು. ಆದರೆ, ಪೊಲೀಸರು ಆರಂಭದಲ್ಲಿ ದೂರನ್ನು ಸ್ವೀಕರಿಸಲು ಸಿದ್ಧರಿರಲಿಲ್ಲ ಎಂದು ಆಕೆಯ ಕುಟುಂಬದವರು ಹೇಳಿದ್ದಾರೆ.

ಅಂಶಿಕಾಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಕೆಯ ಬಿಡುಗಡೆಯ ನಂತರ, ಅವರು ಮತ್ತು ಅವರ ತಂದೆ ಕಾನ್ಪುರದ ಉಪ ಪೊಲೀಸ್ ಆಯುಕ್ತರನ್ನು (ಡಿಸಿಪಿ) ಸಂಪರ್ಕಿಸಿದರು, ಅವರು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು, (ಎಫ್‌ಐಆರ್) ದಾಖಲಿಸಲು ಆದೇಶಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪ್ರದೂಷ ಕಾಲದ ಮಹತ್ವ ಹಾಗೂ ಹಿಂದಿನ ರಹಸ್ಯ ತಿಳಿಯಿರಿ
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​