AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ. ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ […]

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ
Fire
Lakshmi Hegde
| Edited By: |

Updated on:Apr 22, 2021 | 2:39 PM

Share

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ.

ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ ಮಾಧ್ಯಮ​ ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆ ಯುವಕ ಬ್ಯಾಗ್​​ನ್ನು ಕೆಳಗೆ ಬಿಸಾಕಿದ್ದಾರೆ. ಆದರೂ ಅವರ ಕೈ ಸುಟ್ಟಿದ್ದು, ತಲೆ ಕೂದಲೂ ಸಹ ಸುಟ್ಟಿದೆ.

ಇದು ಸ್ಯಾಮ್ಸಂಗ್ ಫೋನ್​ ಆಗಿದ್ದು, ಯುವಕ 2016ರಲ್ಲಿ ಖರೀದಿ ಮಾಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ಹಲವಾರು ದಿನಗಳಿಂದಲೂ ಮೊಬೈಲ್​ನ ಬ್ಯಾಟರಿಯಲ್ಲಿ ಸಮಸ್ಯೆ ಆಗುತ್ತಿತ್ತು ಎಂದು ಯುವಕ ಹೇಳಿಕೊಂಡಿದ್ದಾನೆ. ಅದೇನೇ ಇರಲಿ, ವಿಡಿಯೋ ನೋಡಿದ ನೆಟ್ಟಿಗರು, ತಮಗೆ ತುಂಬ ಶಾಕ್ ಆಗಿದ್ದಾಗಿ ಹೇಳಿಕೊಂಡಿದ್ದಾರೆ. ಮೊಬೈಲ್ ಎಷ್ಟೇ ಅನಿವಾರ್ಯತೆ ಇದ್ದರೂ, ಅದರ ಬಗ್ಗೆ ತುಂಬ ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಉಲ್ಲಂಘಿಸುವ ವಾಹನಗಳ ಜಪ್ತಿಗೆ ಆದೇಶಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೂ ಏನು ಹೇಳಿದರು?

ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್​ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕ್ಲಾಸ್​

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

Published On - 2:09 pm, Thu, 22 April 21

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ