AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ. ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ […]

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ
Fire
Follow us
Lakshmi Hegde
| Updated By: Digi Tech Desk

Updated on:Apr 22, 2021 | 2:39 PM

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ.

ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ ಮಾಧ್ಯಮ​ ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆ ಯುವಕ ಬ್ಯಾಗ್​​ನ್ನು ಕೆಳಗೆ ಬಿಸಾಕಿದ್ದಾರೆ. ಆದರೂ ಅವರ ಕೈ ಸುಟ್ಟಿದ್ದು, ತಲೆ ಕೂದಲೂ ಸಹ ಸುಟ್ಟಿದೆ.

ಇದು ಸ್ಯಾಮ್ಸಂಗ್ ಫೋನ್​ ಆಗಿದ್ದು, ಯುವಕ 2016ರಲ್ಲಿ ಖರೀದಿ ಮಾಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ಹಲವಾರು ದಿನಗಳಿಂದಲೂ ಮೊಬೈಲ್​ನ ಬ್ಯಾಟರಿಯಲ್ಲಿ ಸಮಸ್ಯೆ ಆಗುತ್ತಿತ್ತು ಎಂದು ಯುವಕ ಹೇಳಿಕೊಂಡಿದ್ದಾನೆ. ಅದೇನೇ ಇರಲಿ, ವಿಡಿಯೋ ನೋಡಿದ ನೆಟ್ಟಿಗರು, ತಮಗೆ ತುಂಬ ಶಾಕ್ ಆಗಿದ್ದಾಗಿ ಹೇಳಿಕೊಂಡಿದ್ದಾರೆ. ಮೊಬೈಲ್ ಎಷ್ಟೇ ಅನಿವಾರ್ಯತೆ ಇದ್ದರೂ, ಅದರ ಬಗ್ಗೆ ತುಂಬ ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಉಲ್ಲಂಘಿಸುವ ವಾಹನಗಳ ಜಪ್ತಿಗೆ ಆದೇಶಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೂ ಏನು ಹೇಳಿದರು?

ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್​ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕ್ಲಾಸ್​

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

Published On - 2:09 pm, Thu, 22 April 21

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ