AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ. ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ […]

Viral Video: ಬ್ಯಾಗ್​​ನಲ್ಲಿದ್ದ ಮೊಬೈಲ್​​ನಲ್ಲಿ ಬೆಂಕಿ; ಕೈ, ತಲೆಕೂದಲು ಸುಟ್ಟುಕೊಂಡ ಯುವಕ
Fire
Lakshmi Hegde
| Updated By: Digi Tech Desk|

Updated on:Apr 22, 2021 | 2:39 PM

Share

ಚಾರ್ಜ್​​​ಗೆ ಹಾಕಿದ್ದ ಮೊಬೈಲ್​ ಸ್ಫೋಟವಾಗಿದ್ದನ್ನು, ಮೊಬೈಲ್ ಸ್ಫೋಟದಿಂದ ಕೆಲವರು ಗಂಭೀರವಾಗಿ ಗಾಯಗೊಂಡಿದ್ದನ್ನು ಕೇಳಿದ್ದೇವೆ. ಆದರೆ ಈಗ ಮೊಬೈಲ್​​ಗೆ ಬೆಂಕಿ ಹೊತ್ತಿಕೊಂಡ ವಿಡಿಯೋವೊಂದು ವೈರಲ್ ಆಗಿದ್ದು, ನೆಟ್ಟಿಗರು ಹುಬ್ಬೇರಿಸಿದ್ದಾರೆ.. ಅಬ್ಬಾ.. ! ಇದು ನಿಜಕ್ಕೂ ಭಯಾನಕ ಎಂದಿದ್ದಾರೆ.

ಯುವಕ ಹಾಗೂ ಯುವತಿ ರಸ್ತೆಯಲ್ಲಿ ಹೋಗುತ್ತಿರುತ್ತಾರೆ. ಯುವಕನ ಎಡಭುಜದಲ್ಲಿ ಬ್ಯಾಗ್ ಇರುತ್ತದೆ. ಅದರಲ್ಲಿ ಇರುವ ಮೊಬೈಲ್​ನಲ್ಲಿ ಒಮ್ಮೆಲೇ ಬೆಂಕಿ ಕಾಣಿಸಿಕೊಂಡು, ಬ್ಯಾಗ್ ಹೊತ್ತಿ ಉರಿಯಲು ಪ್ರಾರಂಭಿಸಿದೆ. ಈ ಘಟನೆ ನಡೆದಿದ್ದು ಚೀನಾದಲ್ಲಿ ಎಂದು ಹೇಳಲಾಗಿದ್ದು, ದಕ್ಷಿಣ ಚೀನಾ ಮಾರ್ನಿಂಗ್​ ಪೋಸ್ಟ್ ಮಾಧ್ಯಮ​ ಈ ವಿಡಿಯೋವನ್ನು ಶೇರ್​ ಮಾಡಿಕೊಂಡಿದೆ. ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆ ಯುವಕ ಬ್ಯಾಗ್​​ನ್ನು ಕೆಳಗೆ ಬಿಸಾಕಿದ್ದಾರೆ. ಆದರೂ ಅವರ ಕೈ ಸುಟ್ಟಿದ್ದು, ತಲೆ ಕೂದಲೂ ಸಹ ಸುಟ್ಟಿದೆ.

ಇದು ಸ್ಯಾಮ್ಸಂಗ್ ಫೋನ್​ ಆಗಿದ್ದು, ಯುವಕ 2016ರಲ್ಲಿ ಖರೀದಿ ಮಾಡಿದ್ದ ಎಂದು ತಿಳಿದುಬಂದಿದೆ. ಇನ್ನು ಕಳೆದ ಹಲವಾರು ದಿನಗಳಿಂದಲೂ ಮೊಬೈಲ್​ನ ಬ್ಯಾಟರಿಯಲ್ಲಿ ಸಮಸ್ಯೆ ಆಗುತ್ತಿತ್ತು ಎಂದು ಯುವಕ ಹೇಳಿಕೊಂಡಿದ್ದಾನೆ. ಅದೇನೇ ಇರಲಿ, ವಿಡಿಯೋ ನೋಡಿದ ನೆಟ್ಟಿಗರು, ತಮಗೆ ತುಂಬ ಶಾಕ್ ಆಗಿದ್ದಾಗಿ ಹೇಳಿಕೊಂಡಿದ್ದಾರೆ. ಮೊಬೈಲ್ ಎಷ್ಟೇ ಅನಿವಾರ್ಯತೆ ಇದ್ದರೂ, ಅದರ ಬಗ್ಗೆ ತುಂಬ ಎಚ್ಚರಿಕೆಯಿಂದ ಇರಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೈಟ್ ಕರ್ಫ್ಯೂ ಉಲ್ಲಂಘಿಸುವ ವಾಹನಗಳ ಜಪ್ತಿಗೆ ಆದೇಶಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇನ್ನೂ ಏನು ಹೇಳಿದರು?

ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್​ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕ್ಲಾಸ್​

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

Published On - 2:09 pm, Thu, 22 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು